ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಹಾಗೂ ಗದಗ ಜಿಲ್ಲೆಗಳು ಮೊದಲ ಸ್ಥಾನದಲ್ಲಿವೆ. ಕಳೆದ ವರ್ಷ ಹಂಗಾಮಿ ಮುಂಗಾರಿನಿಂದ ಉಂಟಾದ ಬೆಳೆ ಹಾನಿಯಿಂದ ಇಲ್ಲಿನ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ತೊಗರಿ,ಹತ್ತಿ,ಭತ್ತ,ರಾಗಿ, ಮೆಕ್ಕೆಜೋಳ, ಸೋಯಾಬಿನ್, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಬೆಳೆವಿಮೆ ಮಾಡಿಸಿದ ಫಲವಾಗಿ ಇದೀಗ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಫಸಲ್ ಭೀಮಾ ಯೋಜನೆಯಡಿ ರಾಜ್ಯಕ್ಕೆ 14ಸಾವಿರದ 48 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಭಾಗದ ರೈತರು ಯೋಜನೆಯ ಹೆಚ್ಚು ಫಲಾನುಭವಿಗಳಾಗಿದ್ದಾರೆ.
2ಲಕ್ಷದ 18ಸಾವಿರದ 868 ರೈತರ, 2ಕೋಟಿ 57ಲಕ್ಷದ 962 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದು, 68 ಕೋಟಿ 57 ಲಕ್ಷ ಹಣ ಜಿಲ್ಲೆಗೆ ಬಿಡುಗಡೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಮದ್ ಪಟೇಲ್ ಹೇಳಿದ್ದಾರೆ. ಅತಿವೃಷ್ಠಿ ಹಾಗೂ ಅನಾವೃಷ್ಟಿ ಎರಡರಿಂದಲೂ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ವಿಮಾ ಯೋಜನೆ ಮಾಡಿಸುವುದರ ಫಲವಾಗಿ ಭಿತ್ತನೆಯಿಂದ ಕಟಾವಿನವರೆಗೂ ಬೆಳೆವಿಮೆ ದೊರೆಯಲಿದೆ ಎಂದು ಹೇಳುತ್ತಾರೆ ರೈತ ವಿಶ್ವನಾಥ್ ಪೂಜಾರಿ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…