ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಹಾಗೂ ಗದಗ ಜಿಲ್ಲೆಗಳು ಮೊದಲ ಸ್ಥಾನದಲ್ಲಿವೆ. ಕಳೆದ ವರ್ಷ ಹಂಗಾಮಿ ಮುಂಗಾರಿನಿಂದ ಉಂಟಾದ ಬೆಳೆ ಹಾನಿಯಿಂದ ಇಲ್ಲಿನ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ತೊಗರಿ,ಹತ್ತಿ,ಭತ್ತ,ರಾಗಿ, ಮೆಕ್ಕೆಜೋಳ, ಸೋಯಾಬಿನ್, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಬೆಳೆವಿಮೆ ಮಾಡಿಸಿದ ಫಲವಾಗಿ ಇದೀಗ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಫಸಲ್ ಭೀಮಾ ಯೋಜನೆಯಡಿ ರಾಜ್ಯಕ್ಕೆ 14ಸಾವಿರದ 48 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಭಾಗದ ರೈತರು ಯೋಜನೆಯ ಹೆಚ್ಚು ಫಲಾನುಭವಿಗಳಾಗಿದ್ದಾರೆ.
2ಲಕ್ಷದ 18ಸಾವಿರದ 868 ರೈತರ, 2ಕೋಟಿ 57ಲಕ್ಷದ 962 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದು, 68 ಕೋಟಿ 57 ಲಕ್ಷ ಹಣ ಜಿಲ್ಲೆಗೆ ಬಿಡುಗಡೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಮದ್ ಪಟೇಲ್ ಹೇಳಿದ್ದಾರೆ. ಅತಿವೃಷ್ಠಿ ಹಾಗೂ ಅನಾವೃಷ್ಟಿ ಎರಡರಿಂದಲೂ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ವಿಮಾ ಯೋಜನೆ ಮಾಡಿಸುವುದರ ಫಲವಾಗಿ ಭಿತ್ತನೆಯಿಂದ ಕಟಾವಿನವರೆಗೂ ಬೆಳೆವಿಮೆ ದೊರೆಯಲಿದೆ ಎಂದು ಹೇಳುತ್ತಾರೆ ರೈತ ವಿಶ್ವನಾಥ್ ಪೂಜಾರಿ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…