ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಹಾಗೂ ಗದಗ ಜಿಲ್ಲೆಗಳು ಮೊದಲ ಸ್ಥಾನದಲ್ಲಿವೆ. ಕಳೆದ ವರ್ಷ ಹಂಗಾಮಿ ಮುಂಗಾರಿನಿಂದ ಉಂಟಾದ ಬೆಳೆ ಹಾನಿಯಿಂದ ಇಲ್ಲಿನ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ತೊಗರಿ,ಹತ್ತಿ,ಭತ್ತ,ರಾಗಿ, ಮೆಕ್ಕೆಜೋಳ, ಸೋಯಾಬಿನ್, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಬೆಳೆವಿಮೆ ಮಾಡಿಸಿದ ಫಲವಾಗಿ ಇದೀಗ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಫಸಲ್ ಭೀಮಾ ಯೋಜನೆಯಡಿ ರಾಜ್ಯಕ್ಕೆ 14ಸಾವಿರದ 48 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಭಾಗದ ರೈತರು ಯೋಜನೆಯ ಹೆಚ್ಚು ಫಲಾನುಭವಿಗಳಾಗಿದ್ದಾರೆ.
2ಲಕ್ಷದ 18ಸಾವಿರದ 868 ರೈತರ, 2ಕೋಟಿ 57ಲಕ್ಷದ 962 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದು, 68 ಕೋಟಿ 57 ಲಕ್ಷ ಹಣ ಜಿಲ್ಲೆಗೆ ಬಿಡುಗಡೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಮದ್ ಪಟೇಲ್ ಹೇಳಿದ್ದಾರೆ. ಅತಿವೃಷ್ಠಿ ಹಾಗೂ ಅನಾವೃಷ್ಟಿ ಎರಡರಿಂದಲೂ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ವಿಮಾ ಯೋಜನೆ ಮಾಡಿಸುವುದರ ಫಲವಾಗಿ ಭಿತ್ತನೆಯಿಂದ ಕಟಾವಿನವರೆಗೂ ಬೆಳೆವಿಮೆ ದೊರೆಯಲಿದೆ ಎಂದು ಹೇಳುತ್ತಾರೆ ರೈತ ವಿಶ್ವನಾಥ್ ಪೂಜಾರಿ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…