Advertisement
ಪ್ರಮುಖ

ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |

Share

ಹವಾಮಾನ ಬದಲಾವಣೆಯ ಸಮಸ್ಯೆಯನ್ನು ತಪ್ಪಿಸಲು ಕಾಡುಗಳ ಅಭಿವೃದ್ಧಿ, ಅರಣ್ಯೀಕರಣದ ಅನಿವಾರ್ಯತೆ ಇದೆ.ಈ ನಿಟ್ಟಿನಲ್ಲಿ ಕಾಡು ಬೆಳೆಸುವ ಹಾಗೂ ಉಳಿಸುವ ಉದ್ದೇಶದಿಂದ ವೇಗವಾಗಿ ಬೆಳೆಯುವ ಮರಗಳ ಕಡೆಗೆ ಆದ್ಯತೆ ನೀಡುವುದು ಹಾಗೂ ಕೃಷಿ ಭೂಮಿಯಲ್ಲಿ ಅರಣ್ಯೀಕರಣಕ್ಕೆ ಪ್ರೋತ್ಸಾಹ ಸೇರಿದಂತೆ ವಿವಿಧ ಯೋಜನೆಗಳ ಕಡೆಗೆ ಗಮನಹರಿಸಲು ಕಾರ್ಯತಂತ್ರಗಳನ್ನು ರಚಿಸಲಾಗುತ್ತಿದೆ. ಜಾಗತಿಕವಾಗಿಯೂ ಕೂಡಾ ಈ ಬಗ್ಗೆ ಚಿಂತನೆ ನಡೆಯುತ್ತಿದೆ.

ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ ಆಯೋಜಿಸಿರುವ ಗೋಷ್ಟಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿವೆ. ವೇಗವಾಗಿ ಬೆಳೆಯುವ ಮರಗಳನ್ನು ಉಳಿಸಿಕೊಳ್ಳುವ ಮೂಲಕ ಮತ್ತು ಪರಿಸರವನ್ನು ಉಳಿಸಿಕೊಳ್ಳುವ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಯೋಜನೆಗಳು ನಡೆಯುತ್ತಿವೆ. ಇದಕ್ಕಾಗಿಕೆಲವು ಮಾರ್ಗಸೂಚಿಗಳನ್ನು ಕೂಡಾ ಪ್ರಕಟಿಸಲಾಗಿದೆ. ಈ ಮೂಲಕ ಅರಣ್ಯದ ಉಳಿವು, ಪರಿಸರದಲ್ಲಿ ಹವಾಮಾನ ಬದಲಾವಣೆಯನ್ನು ತಪ್ಪಿಸುವ ಹೆಜ್ಜೆಗಳ ಕಡೆಗೆ ಆದ್ಯತೆ ನೀಡಲಾಗುತ್ತಿದೆ.

ವೇಗವಾಗಿ ಬೆಳೆಯುವ ಮರಗಳ ಸುಸ್ಥಿರ ನಿರ್ವಹಣೆಯ ಬಗ್ಗೆ ಗಮನ ಕೊಡಲು ನಿರ್ಧರಿಸಲಾಗಿದೆ. ಪ್ರಪಂಚದಾದ್ಯಂತ ವೇಗವಾಗಿ ಬೆಳೆಯುವ ಇತರ ಪ್ರಬೇಧದ ಮರಗಳೊಂದಿಗೆ ವಿವಿಧ ಜಾತಿಗಳ ಗುಣಗಳನ್ನು ಮತ್ತು ಸುಸ್ಥಿರ ನಿರ್ವಹಣಾ ವಿಧಾನಗಳನ್ನು ಗಮನಿಸಿಕೊಂಡು ಆಯಾ ಪ್ರದೇಶಕ್ಕೆ ಸೂಕ್ತವಾದ ಗಿಡಗಳನ್ನು ನೆಡುವ ಬಗ್ಗೆ ಯೋಜಿಸಲಾಗುತ್ತಿದೆ.  ಹೀಗಾಗಿ ಇತ್ತೀಚಿನ ವಿಜ್ಞಾನ ಮತ್ತು ಹೊಸ ವಿಧಾನಗಳನ್ನು  ಬಳಸಿಕೊಂಡು ಜಾಗತಿಕವಾಗಿ ಇದರ ಪ್ರಯೋಜನಗಳನ್ನು ಗರಿಷ್ಟವಾಗಿ ಪಡೆಯಲು ಕೃಷಿಯನ್ನು ಹಾಗೂ ಕೃಷಿವಲಯದ ಆರ್ಥಿಕ ವೃದ್ಧಿಗೂ ಸಹಕಾರಿಯಾಗುವಂತೆಯೂ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಹೀಗಾದರೆ ಅವು ಸ್ಥಳೀಯ ಸಮುದಾಯಗಳಿಗೆ ಜೀವನೋಪಾಯವನ್ನು ಒದಗಿಸುತ್ತವೆ ಮತ್ತು ಹವಾಮಾನ ಬದಲಾವಣೆಯನ್ನು ಎದುರಿಸಲು  ಸಾಮರ್ಥ್ಯವನ್ನು ಕೂಡಾ ಹೊಂದುತ್ತವೆ ಎಂದು ಅಭಿಪ್ರಾಯ ಪಡಲಾಗಿದೆ.

ವಿದೇಶಗಳಲ್ಲಿ ಪೋಪ್ಲರ್, ಯೂಕಲಿಪ್ಟಸ್, ಪೈನ್ ಮತ್ತು ಸ್ಪ್ರೂಸ್‌ನಂತಹ ವೇಗವಾಗಿ ಬೆಳೆಯುವ ಮರಗಳು ಸೂಕ್ತ ಪರಿಸ್ಥಿತಿಗಳಲ್ಲಿ ವೇಗವಾಗಿ ಬೆಳೆಯುತ್ತವೆ ಮತ್ತು  ಇತರ ವೇಗವಾಗಿ ಬೆಳೆಯುವ ಪ್ರಭೇದಗಳನ್ನು ಪ್ರಪಂಚದಾದ್ಯಂತ ಸಹಸ್ರಾರು ವರ್ಷಗಳಿಂದ ಅಭಿವೃದ್ಧಿಪಡಿಸಲಾಗಿದೆ . ಈ ಮರಗಳು ವೇಗವಾಗಿ ಬೆಳೆಯುವುದಲ್ಲದೆ, ಜಲಸಂರಕ್ಷಣೆ, ಹವಾಮಾನ ನಿಯಂತ್ರಣ, ಉತ್ತಮ ಗುಣಮಟ್ಟದ ಮಣ್ಣಿನಂತಹ ಪರಿಸರ ಪೂರಕ ವಾತಾವರಣವನ್ನೂ ಸೃಷ್ಟಿ ಮಾಡುತ್ತದೆ.

ಪರಿಸರ ನಿರ್ವಹಣೆಯು ಸರಿಯಾದ ವ್ಯವಸ್ಥೆಯಲ್ಲಿ ಆಗದೇ ಇದ್ದರೆ ಭವಿಷ್ಯದಲ್ಲಿ ಇಡೀ ಪ್ರಪಂಚದಲ್ಲಿ ಕೃಷಿ, ಆಹಾರ ಉತ್ಪಾದನೆಯ ಮೇಲೆ ಹವಾಮಾನ ವೈಪರೀತ್ಯ ಗಂಭೀರವಾದ ಪರಿಣಾಮ ಬೀರಲಿದೆ.  ಹೀಗಾಗಿ ಕೃಷಿ ಆಹಾರ ವ್ಯವಸ್ಥೆಗಳತ್ತ ಪರಿವರ್ತನೆಯನ್ನು ಬೆಂಬಲಿಸಲು ಮತ್ತು ವೇಗವಾಗಿ ಬೆಳೆಯುವ ಮರಗಳನ್ನು ಸಾಧ್ಯವಾದಷ್ಟು ಪರಿಣಾಮಕಾರಿಯಾಗಿ ಮತ್ತು ವ್ಯಾಪಕವಾಗಿ ಯೋಜಿಸುವ ಮತ್ತು ಬೆಳೆಸುವಲ್ಲಿ ಹೂಡಿಕೆಯ ಅಗತ್ಯವನ್ನು ಹೇಳುತ್ತದೆ. ವಿಶ್ವಾದ್ಯಂತ ಅರಣ್ಯ ಪ್ರದೇಶದ 93 ಪ್ರತಿಶತವು ನೈಸರ್ಗಿಕವಾದ ಕಾಡುಗಳಿಂದ ಕೂಡಿದೆ ಮತ್ತು 7 ಪ್ರತಿಶತವನ್ನು ಮಾತ್ರಾ ನೆಡಲಾಗುತ್ತದೆ ಎಂದು  ಜಾಗತಿಕ ಅರಣ್ಯ ಸಂಪನ್ಮೂಲಗಳ ಮೌಲ್ಯಮಾಪನ ವರದಿ 2020ರಲ್ಲಿ ತಿಳಿಸಿದೆ. ಹೀಗಾಗಿ ಈಗ ವೇಗವಾಗಿ ಬೆಳೆಯುವ ಮರದ ಕಡೆಗೆ ಗಮನ ನೀಡಲಾಗುತ್ತಿದೆ.

2050 ರ ವೇಳೆಗೆ ಮರದ ಉತ್ಪನ್ನಗಳಿಗೆ ಜಾಗತಿಕ ಬೇಡಿಕೆ ಮೂರನೇ ಒಂದು ಭಾಗದಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಇದೇ ವೇಳೆ  ಜಾಗತಿಕ ತಾಪಮಾನ,  ತೀವ್ರ ಹವಾಮಾನಕ್ಕೆ ತ್ವರಿತ ಹೊಂದಾಣಿಕೆ ಮತ್ತು ಸ್ಥಿತಿಸ್ಥಾಪಕತ್ವ-ನಿರ್ಮಾಣದ ಅಗತ್ಯವಿದೆ.ಇದಕ್ಕಾಗಿ ವಿವಿಧ ವಿಭಾಗಗಳನ್ನು ಮಾಡಿ ಮರ ಬೆಳೆಯವ, ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗುವ ಹಾಗೂ ಪರಿಸರ ಉಳಿಸುವ ಯೋಜನೆಗಳಿಗೆ ಆದ್ಯತೆ ನೀಡಬೇಕಾಗಿದೆ ಎಂದು ವರದಿ ಹೇಳಿದೆ.ಇದಕ್ಕಾಗಿ   ವಿಶ್ವಾದ್ಯಂತ ವೇಗವಾಗಿ ಬೆಳೆಯುವ ಮರಗಳನ್ನು ಯಶಸ್ವಿಯಾಗಿ ನೆಡುವುದನ್ನು ಹೆಚ್ಚಿಸಲು ಬೆಂಬಲ ಬೇಕಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

6 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

16 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

17 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

21 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

22 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

1 day ago