Advertisement
MIRROR FOCUS

ಜುಲೈನಲ್ಲಿ ಚುರುಕಾದ ಮುಂಗಾರು | ರೈತರಲ್ಲಿ ಭರವಸೆ ಮೂಡಿಸಿದ ಮಳೆ | ದೇಶದಲ್ಲಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಬಿತ್ತನೆ |

Share

ಮುಂಗಾರು ಮಳೆಯಿಂದ(Monsoon Rain) ದೇಶದ ಕೃಷಿ(Agriculture) ನಿರ್ಧರಿತವಾಗುತ್ತದೆ. ಚೆನ್ನಾಗಿ ಮಳೆ ಬಂದರೆ ಬೆಳೆ(Crop), ಇಲ್ಲವಾದರೆ ಬರ(Drought), ನಷ್ಟ, ಬೆಲೆ ಏರಿಕೆ(Price hike) ಎಲ್ಲಾ ಬಿಸಿಗಳನ್ನು ಅನುಭವಿಸಬೇಕಾಗುತ್ತದೆ. ಆದರೆ ಈ ಬಾರಿ ಜುಲೈ 6ರ ವೇಳೆಗೆ ದೇಶದಲ್ಲಿ ಬಿದ್ದ ಸಂಚಿತ ಮಳೆಯು ದೀರ್ಘಾವಧಿಯ ಸರಾಸರಿಗಿಂತ (ಜುಲೈ 6 ರಂತೆ) ಶೇ 1ರಷ್ಟು ಹೆಚ್ಚಾಗಿದ್ದರೆ, ಜುಲೈ 3ರಂತೆ ಸಾಪ್ತಾಹಿಕ ಮಳೆಯು ದೇಶದಲ್ಲಿ ದೀರ್ಘಕಾಲೀನ ಸರಾಸರಿಗಿಂತ ಶೇ 32ರಷ್ಟು ಹೆಚ್ಚಾಗಿದೆ ಎಂದು ವರದಿಯೊಂದು(Report) ತಿಳಿಸಿದೆ. ಹೀಗಾಗಿ ಈ ಬಾರಿ ಮುಂಗಾರು ಬಹುತೇಕ ಸಾಮಾನ್ಯವಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಕಳೆದ ವಾರ ದೇಶದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗುವುದರೊಂದಿಗೆ ಪ್ರಾದೇಶಿಕ ಮಳೆ ಪ್ರಮಾಣ ವ್ಯತ್ಯಾಸವು ಕಡಿಮೆಯಾಗಿದೆ. ಉತ್ತರ ಮತ್ತು ಪಶ್ಚಿಮ ಭಾರತ (ಶೇ 3), ಮಧ್ಯ ಭಾರತ (ಶೇ ಮೈನಸ್ 6), ಪೂರ್ವ ಮತ್ತು ಈಶಾನ್ಯ ಭಾರತ (ಶೇ 0) ಮತ್ತು ದಕ್ಷಿಣ ಪರ್ಯಾಯ ದ್ವೀಪ (ಶೇ 13) ಗಳಲ್ಲಿ ಈವರೆಗೆ ಸಾಮಾನ್ಯ ಮಳೆಯಾಗಿದೆ ಎಂದು ಎಂಕೆ ಗ್ಲೋಬಲ್ ಫೈನಾನ್ಷಿಯಲ್ ಸರ್ವೀಸಸ್ ವರದಿ ತಿಳಿಸಿದೆ.

“ಮಳೆಯ ಕೊರತೆಯೊಂದಿಗೆ ಜೂನ್ ತಿಂಗಳು ಕೊನೆಗೊಂಡಿತ್ತು. ಹೀಗಾಗಿ ಜುಲೈನಲ್ಲಿ ಉತ್ತಮ ಮಳೆ ಬೇಕಿದೆ. ಅದಕ್ಕೆ ತಕ್ಕಂತೆ ಭರವಸೆಯೊಂದಿಗೆ ಜುಲೈ ತಿಂಗಳು ಆರಂಭವಾಗಿದೆ” ಎಂದು ಎಂಕೆ ಗ್ಲೋಬಲ್ ಫೈನಾನ್ಷಿಯಲ್ ಸರ್ವೀಸಸ್​ನ ಪ್ರಮುಖ ಅರ್ಥಶಾಸ್ತ್ರಜ್ಞ ಮಾಧವಿ ಅರೋರಾ ಹೇಳಿದರು. ಈ ವರ್ಷ ಬಿತ್ತನೆ ವಿಳಂಬವಾಗಿದ್ದರೂ, ಈಗ ಅದು ವೇಗ ಪಡೆದುಕೊಂಡಿದೆ. ಅಲ್ಲದೆ ಕಳೆದ ವರ್ಷಕ್ಕಿಂತ ಹೆಚ್ಚಿನ ಬಿತ್ತನೆಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. “ಜೂನ್ 28ರ ಹೊತ್ತಿಗೆ ಬಿತ್ತನೆಗೆ ಒಳಗಾದ ಒಟ್ಟು ಪ್ರದೇಶ (24.1 ಮಿಲಿಯನ್ ಹೆಕ್ಟೇರ್)ವು ಕಳೆದ ವರ್ಷಕ್ಕಿಂತ ತೀವ್ರವಾಗಿ ಹೆಚ್ಚಾಗಿದೆ (ಶೇಕಡಾ 33). ದ್ವಿದಳ ಧಾನ್ಯಗಳು ಮತ್ತು ಎಣ್ಣೆಕಾಳುಗಳ ತ್ವರಿತ ಬಿತ್ತನೆಯೇ ಇದಕ್ಕೆ ಮುಖ್ಯ ಕಾರಣ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭತ್ತದ ಬಿತ್ತನೆ ಪ್ರದೇಶವು ಕಳೆದ ವರ್ಷದಷ್ಟೇ ಇದೆ. ಕಬ್ಬು ಬಿತ್ತನೆಯೂ ಉತ್ತಮವಾಗಿದೆ. ಆಹಾರೇತರ ಬೆಳೆಗಳಲ್ಲಿ ಹತ್ತಿಯ ಬಿತ್ತನೆ ಹೆಚ್ಚಾಗಿದೆ. ಒಟ್ಟಾರೆ ಬಿತ್ತನೆ ಪ್ರದೇಶವು ಸಾಮಾನ್ಯ ಬಿತ್ತನೆ ಪ್ರದೇಶದ ಶೇಕಡಾ 22ರಷ್ಟಿದೆ. 2023 ರಲ್ಲಿ ಇದೇ ಸಮಯದಲ್ಲಿ ಒಟ್ಟಾರೆ ಬಿತ್ತನೆ ಪ್ರದೇಶವು ಶೇಕಡಾ 18.6 ರಷ್ಟಿತ್ತು. “ಈ ತಿಂಗಳಾಂತ್ಯದ ಹೊತ್ತಿಗೆ ದೇಶದಲ್ಲಿ ಶೇ 80ರಷ್ಟು ಬಿತ್ತನೆ ನಡೆಯುವುದರಿಂದ, ಈ ತಿಂಗಳು ಪೂರ್ತಿ ಉತ್ತಮ ಮಳೆಯಾಗುವುದು ಅಗತ್ಯವಾಗಿದೆ” ಎಂದು ಮಾಧವಿ ಅರೋರಾ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ರಾಜ್ಯದ ಅಡಿಕೆ ವ್ಯಾಪಾರಿಗಳಿಗೆ ಹೊಸ ಸಂಕಷ್ಟ ತಂದೊಡ್ಡಿದೆ.…

1 hour ago

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

2 hours ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

3 hours ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

3 hours ago

ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…

3 hours ago

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

13 hours ago