Advertisement
MIRROR FOCUS

ಜುಲೈನಲ್ಲಿ ಚುರುಕಾದ ಮುಂಗಾರು | ರೈತರಲ್ಲಿ ಭರವಸೆ ಮೂಡಿಸಿದ ಮಳೆ | ದೇಶದಲ್ಲಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಬಿತ್ತನೆ |

Share

ಮುಂಗಾರು ಮಳೆಯಿಂದ(Monsoon Rain) ದೇಶದ ಕೃಷಿ(Agriculture) ನಿರ್ಧರಿತವಾಗುತ್ತದೆ. ಚೆನ್ನಾಗಿ ಮಳೆ ಬಂದರೆ ಬೆಳೆ(Crop), ಇಲ್ಲವಾದರೆ ಬರ(Drought), ನಷ್ಟ, ಬೆಲೆ ಏರಿಕೆ(Price hike) ಎಲ್ಲಾ ಬಿಸಿಗಳನ್ನು ಅನುಭವಿಸಬೇಕಾಗುತ್ತದೆ. ಆದರೆ ಈ ಬಾರಿ ಜುಲೈ 6ರ ವೇಳೆಗೆ ದೇಶದಲ್ಲಿ ಬಿದ್ದ ಸಂಚಿತ ಮಳೆಯು ದೀರ್ಘಾವಧಿಯ ಸರಾಸರಿಗಿಂತ (ಜುಲೈ 6 ರಂತೆ) ಶೇ 1ರಷ್ಟು ಹೆಚ್ಚಾಗಿದ್ದರೆ, ಜುಲೈ 3ರಂತೆ ಸಾಪ್ತಾಹಿಕ ಮಳೆಯು ದೇಶದಲ್ಲಿ ದೀರ್ಘಕಾಲೀನ ಸರಾಸರಿಗಿಂತ ಶೇ 32ರಷ್ಟು ಹೆಚ್ಚಾಗಿದೆ ಎಂದು ವರದಿಯೊಂದು(Report) ತಿಳಿಸಿದೆ. ಹೀಗಾಗಿ ಈ ಬಾರಿ ಮುಂಗಾರು ಬಹುತೇಕ ಸಾಮಾನ್ಯವಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಕಳೆದ ವಾರ ದೇಶದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗುವುದರೊಂದಿಗೆ ಪ್ರಾದೇಶಿಕ ಮಳೆ ಪ್ರಮಾಣ ವ್ಯತ್ಯಾಸವು ಕಡಿಮೆಯಾಗಿದೆ. ಉತ್ತರ ಮತ್ತು ಪಶ್ಚಿಮ ಭಾರತ (ಶೇ 3), ಮಧ್ಯ ಭಾರತ (ಶೇ ಮೈನಸ್ 6), ಪೂರ್ವ ಮತ್ತು ಈಶಾನ್ಯ ಭಾರತ (ಶೇ 0) ಮತ್ತು ದಕ್ಷಿಣ ಪರ್ಯಾಯ ದ್ವೀಪ (ಶೇ 13) ಗಳಲ್ಲಿ ಈವರೆಗೆ ಸಾಮಾನ್ಯ ಮಳೆಯಾಗಿದೆ ಎಂದು ಎಂಕೆ ಗ್ಲೋಬಲ್ ಫೈನಾನ್ಷಿಯಲ್ ಸರ್ವೀಸಸ್ ವರದಿ ತಿಳಿಸಿದೆ.

“ಮಳೆಯ ಕೊರತೆಯೊಂದಿಗೆ ಜೂನ್ ತಿಂಗಳು ಕೊನೆಗೊಂಡಿತ್ತು. ಹೀಗಾಗಿ ಜುಲೈನಲ್ಲಿ ಉತ್ತಮ ಮಳೆ ಬೇಕಿದೆ. ಅದಕ್ಕೆ ತಕ್ಕಂತೆ ಭರವಸೆಯೊಂದಿಗೆ ಜುಲೈ ತಿಂಗಳು ಆರಂಭವಾಗಿದೆ” ಎಂದು ಎಂಕೆ ಗ್ಲೋಬಲ್ ಫೈನಾನ್ಷಿಯಲ್ ಸರ್ವೀಸಸ್​ನ ಪ್ರಮುಖ ಅರ್ಥಶಾಸ್ತ್ರಜ್ಞ ಮಾಧವಿ ಅರೋರಾ ಹೇಳಿದರು. ಈ ವರ್ಷ ಬಿತ್ತನೆ ವಿಳಂಬವಾಗಿದ್ದರೂ, ಈಗ ಅದು ವೇಗ ಪಡೆದುಕೊಂಡಿದೆ. ಅಲ್ಲದೆ ಕಳೆದ ವರ್ಷಕ್ಕಿಂತ ಹೆಚ್ಚಿನ ಬಿತ್ತನೆಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. “ಜೂನ್ 28ರ ಹೊತ್ತಿಗೆ ಬಿತ್ತನೆಗೆ ಒಳಗಾದ ಒಟ್ಟು ಪ್ರದೇಶ (24.1 ಮಿಲಿಯನ್ ಹೆಕ್ಟೇರ್)ವು ಕಳೆದ ವರ್ಷಕ್ಕಿಂತ ತೀವ್ರವಾಗಿ ಹೆಚ್ಚಾಗಿದೆ (ಶೇಕಡಾ 33). ದ್ವಿದಳ ಧಾನ್ಯಗಳು ಮತ್ತು ಎಣ್ಣೆಕಾಳುಗಳ ತ್ವರಿತ ಬಿತ್ತನೆಯೇ ಇದಕ್ಕೆ ಮುಖ್ಯ ಕಾರಣ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭತ್ತದ ಬಿತ್ತನೆ ಪ್ರದೇಶವು ಕಳೆದ ವರ್ಷದಷ್ಟೇ ಇದೆ. ಕಬ್ಬು ಬಿತ್ತನೆಯೂ ಉತ್ತಮವಾಗಿದೆ. ಆಹಾರೇತರ ಬೆಳೆಗಳಲ್ಲಿ ಹತ್ತಿಯ ಬಿತ್ತನೆ ಹೆಚ್ಚಾಗಿದೆ. ಒಟ್ಟಾರೆ ಬಿತ್ತನೆ ಪ್ರದೇಶವು ಸಾಮಾನ್ಯ ಬಿತ್ತನೆ ಪ್ರದೇಶದ ಶೇಕಡಾ 22ರಷ್ಟಿದೆ. 2023 ರಲ್ಲಿ ಇದೇ ಸಮಯದಲ್ಲಿ ಒಟ್ಟಾರೆ ಬಿತ್ತನೆ ಪ್ರದೇಶವು ಶೇಕಡಾ 18.6 ರಷ್ಟಿತ್ತು. “ಈ ತಿಂಗಳಾಂತ್ಯದ ಹೊತ್ತಿಗೆ ದೇಶದಲ್ಲಿ ಶೇ 80ರಷ್ಟು ಬಿತ್ತನೆ ನಡೆಯುವುದರಿಂದ, ಈ ತಿಂಗಳು ಪೂರ್ತಿ ಉತ್ತಮ ಮಳೆಯಾಗುವುದು ಅಗತ್ಯವಾಗಿದೆ” ಎಂದು ಮಾಧವಿ ಅರೋರಾ ಹೇಳಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

4 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

9 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

14 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago