Advertisement
ಸುದ್ದಿಗಳು

ಕಬ್ಬು ಬೆಳೆಗಾರರ ಸಮಸ್ಯೆ | ಆಮರಣಾಂತ ಉಪವಾಸ ಸತ್ಯಾಗ್ರಹ | 104 ದಿನಗಳಿಂದ ರೈತರ ಅಹೋರಾತ್ರಿ ಧರಣಿ | ರೈತರ ಆರೋಗ್ಯದಲ್ಲಿ ಏರುಪೇರು |

Share

ಕಬ್ಬಿಗೆ ವೈಜ್ಞಾನಿಕ ಬೆಲೆ ಹಾಗೂ ಹಾಲಿನ ದರ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಕ್ಕರೆನಾಡು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 104 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ರೈತರು  ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಆಮರಣಾಂತ ಉಪವಾಸ ಸತ್ಯಾಗ್ರಹವನ್ನೂ ರೈತರು ಆರಂಭಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಉಪವಾಸ ಕುಳಿತ ರೈತರ ಆರೋಗ್ಯದಲ್ಲಿ ಏರುಪೇರಾಗಿ ಓರ್ವ ರೈತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಐವರು ರೈತರಿಂದ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ರಾಮಕೃಷ್ಣ ಎಂಬ ರೈತನನ್ನು ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ನಾಲ್ವರು ರೈತರ ಆರೋಗ್ಯದಲ್ಲಿಯೂ ಏರುಪೇರಾಗಿದೆ. ಉಪವಾಸ ನಿರತ ರೈತರ ಆರೋಗ್ಯ ತಪಾಸಣೆಯನ್ನು ಡಿಹೆಚ್ಓ ಡಾ.ಧನಂಜಯ್ ನೇತ್ವತದ ವೈದ್ಯರ ತಂಡ ಮಾಡುತ್ತಿದೆ.

ಉಪವಾಸ ನಿರತ ರೈತರಿಗೆ ಚಿಕಿತ್ಸೆ ಅಗತ್ಯವಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ವೈದ್ಯರ ಸೂಚನೆ ಮೇರೆಗೆ ರೈತರ ಮನವೊಲಿಕೆಗೆ ಪೊಲೀಸರು ಪ್ರಯತ್ನಿಸಿದರು. ಚಿಕಿತ್ಸೆ ಅಗತ್ಯವಿದ್ದು, ಉಪವಾಸ ಕೈ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು. ಪೊಲೀಸರ ಮನವಿಗೂ ಕ್ಯಾರೇ ಎನ್ನದೆ ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

29 minutes ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

11 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

12 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

15 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago