Advertisement
ಸುದ್ದಿಗಳು

ಕಬ್ಬು ಬೆಳೆಗಾರರ ಸಮಸ್ಯೆ | ಆಮರಣಾಂತ ಉಪವಾಸ ಸತ್ಯಾಗ್ರಹ | 104 ದಿನಗಳಿಂದ ರೈತರ ಅಹೋರಾತ್ರಿ ಧರಣಿ | ರೈತರ ಆರೋಗ್ಯದಲ್ಲಿ ಏರುಪೇರು |

Share

ಕಬ್ಬಿಗೆ ವೈಜ್ಞಾನಿಕ ಬೆಲೆ ಹಾಗೂ ಹಾಲಿನ ದರ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಕ್ಕರೆನಾಡು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 104 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ರೈತರು  ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಆಮರಣಾಂತ ಉಪವಾಸ ಸತ್ಯಾಗ್ರಹವನ್ನೂ ರೈತರು ಆರಂಭಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಉಪವಾಸ ಕುಳಿತ ರೈತರ ಆರೋಗ್ಯದಲ್ಲಿ ಏರುಪೇರಾಗಿ ಓರ್ವ ರೈತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಐವರು ರೈತರಿಂದ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ರಾಮಕೃಷ್ಣ ಎಂಬ ರೈತನನ್ನು ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ನಾಲ್ವರು ರೈತರ ಆರೋಗ್ಯದಲ್ಲಿಯೂ ಏರುಪೇರಾಗಿದೆ. ಉಪವಾಸ ನಿರತ ರೈತರ ಆರೋಗ್ಯ ತಪಾಸಣೆಯನ್ನು ಡಿಹೆಚ್ಓ ಡಾ.ಧನಂಜಯ್ ನೇತ್ವತದ ವೈದ್ಯರ ತಂಡ ಮಾಡುತ್ತಿದೆ.

ಉಪವಾಸ ನಿರತ ರೈತರಿಗೆ ಚಿಕಿತ್ಸೆ ಅಗತ್ಯವಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ವೈದ್ಯರ ಸೂಚನೆ ಮೇರೆಗೆ ರೈತರ ಮನವೊಲಿಕೆಗೆ ಪೊಲೀಸರು ಪ್ರಯತ್ನಿಸಿದರು. ಚಿಕಿತ್ಸೆ ಅಗತ್ಯವಿದ್ದು, ಉಪವಾಸ ಕೈ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು. ಪೊಲೀಸರ ಮನವಿಗೂ ಕ್ಯಾರೇ ಎನ್ನದೆ ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

13 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

13 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

13 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

13 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

3 days ago