Advertisement
ಸುದ್ದಿಗಳು

ಕಬ್ಬು ಬೆಳೆಗಾರರ ಸಮಸ್ಯೆ | ಆಮರಣಾಂತ ಉಪವಾಸ ಸತ್ಯಾಗ್ರಹ | 104 ದಿನಗಳಿಂದ ರೈತರ ಅಹೋರಾತ್ರಿ ಧರಣಿ | ರೈತರ ಆರೋಗ್ಯದಲ್ಲಿ ಏರುಪೇರು |

Share

ಕಬ್ಬಿಗೆ ವೈಜ್ಞಾನಿಕ ಬೆಲೆ ಹಾಗೂ ಹಾಲಿನ ದರ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಕ್ಕರೆನಾಡು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 104 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ರೈತರು  ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಆಮರಣಾಂತ ಉಪವಾಸ ಸತ್ಯಾಗ್ರಹವನ್ನೂ ರೈತರು ಆರಂಭಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಉಪವಾಸ ಕುಳಿತ ರೈತರ ಆರೋಗ್ಯದಲ್ಲಿ ಏರುಪೇರಾಗಿ ಓರ್ವ ರೈತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಐವರು ರೈತರಿಂದ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ರಾಮಕೃಷ್ಣ ಎಂಬ ರೈತನನ್ನು ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ನಾಲ್ವರು ರೈತರ ಆರೋಗ್ಯದಲ್ಲಿಯೂ ಏರುಪೇರಾಗಿದೆ. ಉಪವಾಸ ನಿರತ ರೈತರ ಆರೋಗ್ಯ ತಪಾಸಣೆಯನ್ನು ಡಿಹೆಚ್ಓ ಡಾ.ಧನಂಜಯ್ ನೇತ್ವತದ ವೈದ್ಯರ ತಂಡ ಮಾಡುತ್ತಿದೆ.

ಉಪವಾಸ ನಿರತ ರೈತರಿಗೆ ಚಿಕಿತ್ಸೆ ಅಗತ್ಯವಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ವೈದ್ಯರ ಸೂಚನೆ ಮೇರೆಗೆ ರೈತರ ಮನವೊಲಿಕೆಗೆ ಪೊಲೀಸರು ಪ್ರಯತ್ನಿಸಿದರು. ಚಿಕಿತ್ಸೆ ಅಗತ್ಯವಿದ್ದು, ಉಪವಾಸ ಕೈ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು. ಪೊಲೀಸರ ಮನವಿಗೂ ಕ್ಯಾರೇ ಎನ್ನದೆ ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

5 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

10 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

21 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago