Advertisement
MIRROR FOCUS

ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |

Share

ಕೊನೆಗೂ ಕೆಲ ಅಮಾಯಕರ ಜೀವ ಉಳಿದಿದೆ. ತಮ್ಮದಲ್ಲ ತಪ್ಪಿಗೆ ಕಳೆದ ಅನೇಕ ದಿನಗಳಿಂದ ನರಕದಲ್ಲಿದ್ದ ಕೆಲ ನಾಗರೀಕರನ್ನು ಹಮಾಸ್‌ ಬಿಡುಗಡೆಗೊಳಿಸಿದೆ. ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ ಸೇರಿ ಮೂರನೇ ಬ್ಯಾಚ್‍ನ 17ಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಭಾನುವಾರ ಬಿಡುಗಡೆ ಮಾಡಿದೆ.

Advertisement
Advertisement

ಇಸ್ರೇಲ್ ಮತ್ತು ಹಮಾಸ್ (Israel- Hamas) ನಡುವಿನ ಒಪ್ಪಂದದ ಅಡಿಯಲ್ಲಿ 50 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದರೆ 150 ಪ್ಯಾಲೆಸ್ತೇನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಬೇಕು ಎಂದು ಹೇಳಲಾಗಿತ್ತು. ಹಾಗಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಹಮಾಸ್ ಹಾಗೂ ಇಸ್ರೇಲ್ ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮೂರನೇ ಬ್ಯಾಚ್‍ನ 13 ಇಸ್ರೇಲಿಗಳು ಮತ್ತು 4 ವಿದೇಶಿ ಪ್ರಜೆಗಳ ಮೂರನೇ ಬ್ಯಾಚ್ ಅನ್ನು ರೆಡ್ ಕ್ರಾಸ್ ಸಂಸ್ಥೆಗೆ ಹಮಾಸ್ ಹಸ್ತಾಂತರಿಸಿದೆ ಎಂದು ಹೇಳಿದೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ನವೆಂಬರ್ 24 ರಂದು ಪ್ರಾರಂಭವಾಯಿತು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಗಾಜಾ ಪಟ್ಟಿಗೆ ತೆರಳಿ ಸೈನಿಕರಿಗೆ ಸ್ಫೂರ್ತಿ ತುಂಬಿದರು. ಮೊದಲು ಹಮಾಸ್ ಅನ್ನು ನಾಶ ಮಾಡುವುದು ಹಾಗೂ ಎರಡನೆಯದು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಮರಳಿ ತರುವುದು ನಮ್ಮ ಮೂಲ ಉದ್ದೇಶ ಎಂದರು. ಹಮಾಸ್ ಶನಿವಾರ ರಾತ್ರಿ ಒತ್ತೆಯಾಳುಗಳ 2ನೇ ಬ್ಯಾಚ್‍ನಲ್ಲಿ 17 ಜನರನ್ನು ಬಿಡುಗಡೆ ಮಾಡಿತ್ತು. ಇವರಲ್ಲಿ 13 ಇಸ್ರೇಲಿಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. 4 ದಿನಗಳ ಅವಧಿಯಲ್ಲಿ ಒಟ್ಟು 50 ಒತ್ತೆಯಾಳುಗಳನ್ನು 150 ಪ್ಯಾಲೇಸ್ತೀನಿಯನ್ ಕೈದಿಗಳೊಂದಿಗೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಒತ್ತೆಯಾಳುಗಳ ವಿನಿಮಯವಾಗಿ ಇಸ್ರೇಲ್ 39 ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

A third batch of Israel and foreign hostages was released from Hamas captivity on Sunday evening as the group arrived in Israel. They numbered 17, including 14 Israelis and three Thai citizens. The Hamas Group handed over the former captives to the humanitarian organisation Red Cross and were further taken for medical examination.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

7 hours ago

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…

14 hours ago

ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!

ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…

21 hours ago

ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ

ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…

21 hours ago

ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ

ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…

21 hours ago

ಶುದ್ಧ ಹಿಮಾಲಯವೂ ಸುರಕ್ಷಿತವಲ್ಲ..! ಮರುಭೂಮಿ ಧೂಳಿನೊಂದಿಗೆ ಹರಡುವ ರೋಗಕಾರಕಗಳು

ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…

21 hours ago