MIRROR FOCUS

ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊನೆಗೂ ಕೆಲ ಅಮಾಯಕರ ಜೀವ ಉಳಿದಿದೆ. ತಮ್ಮದಲ್ಲ ತಪ್ಪಿಗೆ ಕಳೆದ ಅನೇಕ ದಿನಗಳಿಂದ ನರಕದಲ್ಲಿದ್ದ ಕೆಲ ನಾಗರೀಕರನ್ನು ಹಮಾಸ್‌ ಬಿಡುಗಡೆಗೊಳಿಸಿದೆ. ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ ಸೇರಿ ಮೂರನೇ ಬ್ಯಾಚ್‍ನ 17ಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಭಾನುವಾರ ಬಿಡುಗಡೆ ಮಾಡಿದೆ.

Advertisement
Advertisement

ಇಸ್ರೇಲ್ ಮತ್ತು ಹಮಾಸ್ (Israel- Hamas) ನಡುವಿನ ಒಪ್ಪಂದದ ಅಡಿಯಲ್ಲಿ 50 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದರೆ 150 ಪ್ಯಾಲೆಸ್ತೇನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಬೇಕು ಎಂದು ಹೇಳಲಾಗಿತ್ತು. ಹಾಗಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಹಮಾಸ್ ಹಾಗೂ ಇಸ್ರೇಲ್ ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮೂರನೇ ಬ್ಯಾಚ್‍ನ 13 ಇಸ್ರೇಲಿಗಳು ಮತ್ತು 4 ವಿದೇಶಿ ಪ್ರಜೆಗಳ ಮೂರನೇ ಬ್ಯಾಚ್ ಅನ್ನು ರೆಡ್ ಕ್ರಾಸ್ ಸಂಸ್ಥೆಗೆ ಹಮಾಸ್ ಹಸ್ತಾಂತರಿಸಿದೆ ಎಂದು ಹೇಳಿದೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ನವೆಂಬರ್ 24 ರಂದು ಪ್ರಾರಂಭವಾಯಿತು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಗಾಜಾ ಪಟ್ಟಿಗೆ ತೆರಳಿ ಸೈನಿಕರಿಗೆ ಸ್ಫೂರ್ತಿ ತುಂಬಿದರು. ಮೊದಲು ಹಮಾಸ್ ಅನ್ನು ನಾಶ ಮಾಡುವುದು ಹಾಗೂ ಎರಡನೆಯದು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಮರಳಿ ತರುವುದು ನಮ್ಮ ಮೂಲ ಉದ್ದೇಶ ಎಂದರು. ಹಮಾಸ್ ಶನಿವಾರ ರಾತ್ರಿ ಒತ್ತೆಯಾಳುಗಳ 2ನೇ ಬ್ಯಾಚ್‍ನಲ್ಲಿ 17 ಜನರನ್ನು ಬಿಡುಗಡೆ ಮಾಡಿತ್ತು. ಇವರಲ್ಲಿ 13 ಇಸ್ರೇಲಿಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. 4 ದಿನಗಳ ಅವಧಿಯಲ್ಲಿ ಒಟ್ಟು 50 ಒತ್ತೆಯಾಳುಗಳನ್ನು 150 ಪ್ಯಾಲೇಸ್ತೀನಿಯನ್ ಕೈದಿಗಳೊಂದಿಗೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಒತ್ತೆಯಾಳುಗಳ ವಿನಿಮಯವಾಗಿ ಇಸ್ರೇಲ್ 39 ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

A third batch of Israel and foreign hostages was released from Hamas captivity on Sunday evening as the group arrived in Israel. They numbered 17, including 14 Israelis and three Thai citizens. The Hamas Group handed over the former captives to the humanitarian organisation Red Cross and were further taken for medical examination.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

1 hour ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

2 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

3 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

4 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

6 hours ago