Advertisement
MIRROR FOCUS

ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |

Share

ಕೊನೆಗೂ ಕೆಲ ಅಮಾಯಕರ ಜೀವ ಉಳಿದಿದೆ. ತಮ್ಮದಲ್ಲ ತಪ್ಪಿಗೆ ಕಳೆದ ಅನೇಕ ದಿನಗಳಿಂದ ನರಕದಲ್ಲಿದ್ದ ಕೆಲ ನಾಗರೀಕರನ್ನು ಹಮಾಸ್‌ ಬಿಡುಗಡೆಗೊಳಿಸಿದೆ. ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ ಸೇರಿ ಮೂರನೇ ಬ್ಯಾಚ್‍ನ 17ಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಭಾನುವಾರ ಬಿಡುಗಡೆ ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ (Israel- Hamas) ನಡುವಿನ ಒಪ್ಪಂದದ ಅಡಿಯಲ್ಲಿ 50 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದರೆ 150 ಪ್ಯಾಲೆಸ್ತೇನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಬೇಕು ಎಂದು ಹೇಳಲಾಗಿತ್ತು. ಹಾಗಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಹಮಾಸ್ ಹಾಗೂ ಇಸ್ರೇಲ್ ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮೂರನೇ ಬ್ಯಾಚ್‍ನ 13 ಇಸ್ರೇಲಿಗಳು ಮತ್ತು 4 ವಿದೇಶಿ ಪ್ರಜೆಗಳ ಮೂರನೇ ಬ್ಯಾಚ್ ಅನ್ನು ರೆಡ್ ಕ್ರಾಸ್ ಸಂಸ್ಥೆಗೆ ಹಮಾಸ್ ಹಸ್ತಾಂತರಿಸಿದೆ ಎಂದು ಹೇಳಿದೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ನವೆಂಬರ್ 24 ರಂದು ಪ್ರಾರಂಭವಾಯಿತು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಗಾಜಾ ಪಟ್ಟಿಗೆ ತೆರಳಿ ಸೈನಿಕರಿಗೆ ಸ್ಫೂರ್ತಿ ತುಂಬಿದರು. ಮೊದಲು ಹಮಾಸ್ ಅನ್ನು ನಾಶ ಮಾಡುವುದು ಹಾಗೂ ಎರಡನೆಯದು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಮರಳಿ ತರುವುದು ನಮ್ಮ ಮೂಲ ಉದ್ದೇಶ ಎಂದರು. ಹಮಾಸ್ ಶನಿವಾರ ರಾತ್ರಿ ಒತ್ತೆಯಾಳುಗಳ 2ನೇ ಬ್ಯಾಚ್‍ನಲ್ಲಿ 17 ಜನರನ್ನು ಬಿಡುಗಡೆ ಮಾಡಿತ್ತು. ಇವರಲ್ಲಿ 13 ಇಸ್ರೇಲಿಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. 4 ದಿನಗಳ ಅವಧಿಯಲ್ಲಿ ಒಟ್ಟು 50 ಒತ್ತೆಯಾಳುಗಳನ್ನು 150 ಪ್ಯಾಲೇಸ್ತೀನಿಯನ್ ಕೈದಿಗಳೊಂದಿಗೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಒತ್ತೆಯಾಳುಗಳ ವಿನಿಮಯವಾಗಿ ಇಸ್ರೇಲ್ 39 ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

A third batch of Israel and foreign hostages was released from Hamas captivity on Sunday evening as the group arrived in Israel. They numbered 17, including 14 Israelis and three Thai citizens. The Hamas Group handed over the former captives to the humanitarian organisation Red Cross and were further taken for medical examination.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

29 minutes ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

1 hour ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

6 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

14 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago