Advertisement
MIRROR FOCUS

ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |

Share

ಕೊನೆಗೂ ಕೆಲ ಅಮಾಯಕರ ಜೀವ ಉಳಿದಿದೆ. ತಮ್ಮದಲ್ಲ ತಪ್ಪಿಗೆ ಕಳೆದ ಅನೇಕ ದಿನಗಳಿಂದ ನರಕದಲ್ಲಿದ್ದ ಕೆಲ ನಾಗರೀಕರನ್ನು ಹಮಾಸ್‌ ಬಿಡುಗಡೆಗೊಳಿಸಿದೆ. ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ ಸೇರಿ ಮೂರನೇ ಬ್ಯಾಚ್‍ನ 17ಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಭಾನುವಾರ ಬಿಡುಗಡೆ ಮಾಡಿದೆ.

ಇಸ್ರೇಲ್ ಮತ್ತು ಹಮಾಸ್ (Israel- Hamas) ನಡುವಿನ ಒಪ್ಪಂದದ ಅಡಿಯಲ್ಲಿ 50 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದರೆ 150 ಪ್ಯಾಲೆಸ್ತೇನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಬೇಕು ಎಂದು ಹೇಳಲಾಗಿತ್ತು. ಹಾಗಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಹಮಾಸ್ ಹಾಗೂ ಇಸ್ರೇಲ್ ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮೂರನೇ ಬ್ಯಾಚ್‍ನ 13 ಇಸ್ರೇಲಿಗಳು ಮತ್ತು 4 ವಿದೇಶಿ ಪ್ರಜೆಗಳ ಮೂರನೇ ಬ್ಯಾಚ್ ಅನ್ನು ರೆಡ್ ಕ್ರಾಸ್ ಸಂಸ್ಥೆಗೆ ಹಮಾಸ್ ಹಸ್ತಾಂತರಿಸಿದೆ ಎಂದು ಹೇಳಿದೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ನವೆಂಬರ್ 24 ರಂದು ಪ್ರಾರಂಭವಾಯಿತು.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಗಾಜಾ ಪಟ್ಟಿಗೆ ತೆರಳಿ ಸೈನಿಕರಿಗೆ ಸ್ಫೂರ್ತಿ ತುಂಬಿದರು. ಮೊದಲು ಹಮಾಸ್ ಅನ್ನು ನಾಶ ಮಾಡುವುದು ಹಾಗೂ ಎರಡನೆಯದು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಮರಳಿ ತರುವುದು ನಮ್ಮ ಮೂಲ ಉದ್ದೇಶ ಎಂದರು. ಹಮಾಸ್ ಶನಿವಾರ ರಾತ್ರಿ ಒತ್ತೆಯಾಳುಗಳ 2ನೇ ಬ್ಯಾಚ್‍ನಲ್ಲಿ 17 ಜನರನ್ನು ಬಿಡುಗಡೆ ಮಾಡಿತ್ತು. ಇವರಲ್ಲಿ 13 ಇಸ್ರೇಲಿಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. 4 ದಿನಗಳ ಅವಧಿಯಲ್ಲಿ ಒಟ್ಟು 50 ಒತ್ತೆಯಾಳುಗಳನ್ನು 150 ಪ್ಯಾಲೇಸ್ತೀನಿಯನ್ ಕೈದಿಗಳೊಂದಿಗೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಒತ್ತೆಯಾಳುಗಳ ವಿನಿಮಯವಾಗಿ ಇಸ್ರೇಲ್ 39 ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

A third batch of Israel and foreign hostages was released from Hamas captivity on Sunday evening as the group arrived in Israel. They numbered 17, including 14 Israelis and three Thai citizens. The Hamas Group handed over the former captives to the humanitarian organisation Red Cross and were further taken for medical examination.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

6 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

7 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

7 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

8 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

8 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

8 hours ago