MIRROR FOCUS

ವಿವಿಧೆಡೆ ಭೂ ಕುಸಿತ ಭೀತಿ | ಅಲರ್ಟ್‌ ಆದ ಸರ್ಕಾರ | ಮುನ್ನೆಚ್ಚರಿಕೆಯಾಗಿ ಚಾರ್ಮಾಡಿ ಘಾಟ್ ಬಳಿ ತಂಡ ನಿಯೋಜನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮುಂಗಾರು ಆರ್ಭಟಿಸುತ್ತಿದ್ದಂತೆ ಬೆಟ್ಟ ಗುಡ್ಡಗಳಲ್ಲಿ ಭೂಕುಸಿತ ಉಂಟಾಗುತ್ತಿದೆ. ಉತ್ತರ ಕನ್ನಡದ ಶಿರೂರು , ಕೇರಳದ ವಯನಾಡು  ಪ್ರಕರಣ ಬೆನ್ನಲ್ಲೇ ಶಿರಾಡಿ ಘಾಟಿಯಲ್ಲೂ ಈವರೆಗೆ 6 ಬಾರಿ ಕುಸಿತ ಕಂಡಿದೆ. ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡ ಇದೇ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಫಿನಾಡಿನಲ್ಲೂ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಚಾರ್ಮಾಡಿ ಘಾಟ್  ಆರಂಭದ ಸ್ಥಳವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್  ಬಳಿ ತಂಡವನ್ನು ನಿಯೋಜಿಸಿದೆ.

Advertisement
ನಿರಂತರ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಬೆಟ್ಟಗುಡ್ಡಗಳ ಮಾರ್ಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವುದೇ ರೀತಿಯ ಅನಾಹುತ ಸಂಭವಿಸುವ ಸಾಧ್ಯತೆ ಇರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಡಿಆರ್ ವ್ಯಾನ್‌ನಲ್ಲಿ ಯಾವಾಗಲೂ ಓರ್ವ ಅಧಿಕಾರಿ ಸೇರಿ 7-8 ಸಿಬ್ಬಂದಿ ಇರುತ್ತಾರೆ. ಒಂದು ವೇಳೆ ಭಾರೀ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಏನಾದರೂ ಅನಾಹುತ ಸಂಭವಿಸದರೆ ತಕ್ಷಣ ಅಲ್ಲಿನವರ ಸಹಾಯಕ್ಕೆ ಪೊಲೀಸರು ಅಲರ್ಟ್ ಅಗಲಿದ್ದಾರೆ. ಈ ಕಾರಣಕ್ಕೆ ಕೊಟ್ಟಿಗೆಹಾರದಲ್ಲೇ ಒಂದು ವ್ಯಾನ್ ನಿಯೋಜಿಸಿದ್ದಾರೆ.

ಈ ಮಾರ್ಗ ಬೆಟ್ಟ-ಗುಡ್ಡಗಳ ನಡುವೆ 22 ಕಿ.ಮೀ. ಸಾಗಬೇಕಾಗಿದ್ದು, ಅತ್ಯಂತ ಅಪಾಯಕಾರಿಯಾಗಿದೆ. 2019 ರಿಂದಲೂ ಪ್ರತಿ ವರ್ಷ ಚಾರ್ಮಾಡಿ ಘಾಟಿ ಕುಸಿತಕ್ಕೊಳಗಾಗುತ್ತಲೇ ಇದೆ. ಚಾರ್ಮಾಡಿ ಘಾಟಿಯ ಒಂದು ಬದಿ ಬೆಟ್ಟ-ಗುಡ್ಡಗಳಿಂದ ಕೂಡಿದ್ರೆ ಮತ್ತೊಂದು ಬದಿ ಸಾವಿರಾರು ಅಡಿ ಪ್ರಪಾತ. ಹೀಗಾಗಿ ಇಲ್ಲಿ ಪೊಲೀಸರು ಯಾವಾಗಲೂ ಸರ್ವ ಸನ್ನದ್ಧರಾಗಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

19 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

20 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 days ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago