Advertisement
MIRROR FOCUS

ವಿವಿಧೆಡೆ ಭೂ ಕುಸಿತ ಭೀತಿ | ಅಲರ್ಟ್‌ ಆದ ಸರ್ಕಾರ | ಮುನ್ನೆಚ್ಚರಿಕೆಯಾಗಿ ಚಾರ್ಮಾಡಿ ಘಾಟ್ ಬಳಿ ತಂಡ ನಿಯೋಜನೆ |

Share

ಮುಂಗಾರು ಆರ್ಭಟಿಸುತ್ತಿದ್ದಂತೆ ಬೆಟ್ಟ ಗುಡ್ಡಗಳಲ್ಲಿ ಭೂಕುಸಿತ ಉಂಟಾಗುತ್ತಿದೆ. ಉತ್ತರ ಕನ್ನಡದ ಶಿರೂರು , ಕೇರಳದ ವಯನಾಡು  ಪ್ರಕರಣ ಬೆನ್ನಲ್ಲೇ ಶಿರಾಡಿ ಘಾಟಿಯಲ್ಲೂ ಈವರೆಗೆ 6 ಬಾರಿ ಕುಸಿತ ಕಂಡಿದೆ. ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡ ಇದೇ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಫಿನಾಡಿನಲ್ಲೂ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಚಾರ್ಮಾಡಿ ಘಾಟ್  ಆರಂಭದ ಸ್ಥಳವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್  ಬಳಿ ತಂಡವನ್ನು ನಿಯೋಜಿಸಿದೆ.

ನಿರಂತರ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಬೆಟ್ಟಗುಡ್ಡಗಳ ಮಾರ್ಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವುದೇ ರೀತಿಯ ಅನಾಹುತ ಸಂಭವಿಸುವ ಸಾಧ್ಯತೆ ಇರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಡಿಆರ್ ವ್ಯಾನ್‌ನಲ್ಲಿ ಯಾವಾಗಲೂ ಓರ್ವ ಅಧಿಕಾರಿ ಸೇರಿ 7-8 ಸಿಬ್ಬಂದಿ ಇರುತ್ತಾರೆ. ಒಂದು ವೇಳೆ ಭಾರೀ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಏನಾದರೂ ಅನಾಹುತ ಸಂಭವಿಸದರೆ ತಕ್ಷಣ ಅಲ್ಲಿನವರ ಸಹಾಯಕ್ಕೆ ಪೊಲೀಸರು ಅಲರ್ಟ್ ಅಗಲಿದ್ದಾರೆ. ಈ ಕಾರಣಕ್ಕೆ ಕೊಟ್ಟಿಗೆಹಾರದಲ್ಲೇ ಒಂದು ವ್ಯಾನ್ ನಿಯೋಜಿಸಿದ್ದಾರೆ.

ಈ ಮಾರ್ಗ ಬೆಟ್ಟ-ಗುಡ್ಡಗಳ ನಡುವೆ 22 ಕಿ.ಮೀ. ಸಾಗಬೇಕಾಗಿದ್ದು, ಅತ್ಯಂತ ಅಪಾಯಕಾರಿಯಾಗಿದೆ. 2019 ರಿಂದಲೂ ಪ್ರತಿ ವರ್ಷ ಚಾರ್ಮಾಡಿ ಘಾಟಿ ಕುಸಿತಕ್ಕೊಳಗಾಗುತ್ತಲೇ ಇದೆ. ಚಾರ್ಮಾಡಿ ಘಾಟಿಯ ಒಂದು ಬದಿ ಬೆಟ್ಟ-ಗುಡ್ಡಗಳಿಂದ ಕೂಡಿದ್ರೆ ಮತ್ತೊಂದು ಬದಿ ಸಾವಿರಾರು ಅಡಿ ಪ್ರಪಾತ. ಹೀಗಾಗಿ ಇಲ್ಲಿ ಪೊಲೀಸರು ಯಾವಾಗಲೂ ಸರ್ವ ಸನ್ನದ್ಧರಾಗಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

4 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

7 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

8 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

9 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

21 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

24 hours ago