MIRROR FOCUS

ಜಲಕ್ಷಾಮದ ಜೊತೆಗೆ ವಿದ್ಯುತ್ ಕ್ಷಾಮ ಭೀತಿ | ರಾಯಚೂರು ಆರ್‌ಟಿಪಿಎಸ್‌ನ 4 ವಿದ್ಯುತ್ ಘಟಕಗಳು ಬಂದ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂಮಿ(Earth) ದಿನದಿಂದ ದಿನಕ್ಕೆ ಕಾದ ಕಾವಲಿಯಂತಾಗುತ್ತಿದೆ. ಎಲ್ಲೆಲ್ಲೂ ನೀರಿಗೆ ಕ್ಷಾಮ(Water Crisis) ಎದುರಾಗಿದೆ. ಬಿಸಿಲ ಧಗೆಗೆ ಜನ ಪರದಾಟುತ್ತಿದ್ದಾರೆ. ಫ್ಯಾನ್‌(Fan), ಏಸಿ(AC), ಕೂಲರ್‌(Cooler) ಇಲ್ಲದೆ  ದಿನ ಕಳೆಯೋದು ಕಷ್ಟವಾಗಿದೆ.  ಈ ಮಧ್ಯೆ  ರಾಯಚೂರಿನ (Raichuru) ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ (RTPS) ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆ(Electricity Crisis) ಎದುರಾಗುವ ಸಾಧ್ಯತೆಗಳು ಕಾಣಿಸುತಿದೆ.

Advertisement

ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಉಂಟಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್‌ಟಿಪಿಎಸ್‌ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ.

ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ ಸಮಸ್ಯೆಯಿಂದ ಘಟಕಗಳು ಬಂದ್ ಆಗಿದ್ದು, ಬೇಸಿಗೆಯಲ್ಲಿ ವಿಪರೀತ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

6 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

7 hours ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

7 hours ago

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

7 hours ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

8 hours ago

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ

ಬಾಹ್ಯಕಾಶದಲ್ಲಿ   ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…

8 hours ago