Advertisement
MIRROR FOCUS

ಜಲಕ್ಷಾಮದ ಜೊತೆಗೆ ವಿದ್ಯುತ್ ಕ್ಷಾಮ ಭೀತಿ | ರಾಯಚೂರು ಆರ್‌ಟಿಪಿಎಸ್‌ನ 4 ವಿದ್ಯುತ್ ಘಟಕಗಳು ಬಂದ್ |

Share

ಭೂಮಿ(Earth) ದಿನದಿಂದ ದಿನಕ್ಕೆ ಕಾದ ಕಾವಲಿಯಂತಾಗುತ್ತಿದೆ. ಎಲ್ಲೆಲ್ಲೂ ನೀರಿಗೆ ಕ್ಷಾಮ(Water Crisis) ಎದುರಾಗಿದೆ. ಬಿಸಿಲ ಧಗೆಗೆ ಜನ ಪರದಾಟುತ್ತಿದ್ದಾರೆ. ಫ್ಯಾನ್‌(Fan), ಏಸಿ(AC), ಕೂಲರ್‌(Cooler) ಇಲ್ಲದೆ  ದಿನ ಕಳೆಯೋದು ಕಷ್ಟವಾಗಿದೆ.  ಈ ಮಧ್ಯೆ  ರಾಯಚೂರಿನ (Raichuru) ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ (RTPS) ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆ(Electricity Crisis) ಎದುರಾಗುವ ಸಾಧ್ಯತೆಗಳು ಕಾಣಿಸುತಿದೆ.

ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಉಂಟಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್‌ಟಿಪಿಎಸ್‌ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ.

ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ ಸಮಸ್ಯೆಯಿಂದ ಘಟಕಗಳು ಬಂದ್ ಆಗಿದ್ದು, ಬೇಸಿಗೆಯಲ್ಲಿ ವಿಪರೀತ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

9 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago