Advertisement
MIRROR FOCUS

ಜಲಕ್ಷಾಮದ ಜೊತೆಗೆ ವಿದ್ಯುತ್ ಕ್ಷಾಮ ಭೀತಿ | ರಾಯಚೂರು ಆರ್‌ಟಿಪಿಎಸ್‌ನ 4 ವಿದ್ಯುತ್ ಘಟಕಗಳು ಬಂದ್ |

Share

ಭೂಮಿ(Earth) ದಿನದಿಂದ ದಿನಕ್ಕೆ ಕಾದ ಕಾವಲಿಯಂತಾಗುತ್ತಿದೆ. ಎಲ್ಲೆಲ್ಲೂ ನೀರಿಗೆ ಕ್ಷಾಮ(Water Crisis) ಎದುರಾಗಿದೆ. ಬಿಸಿಲ ಧಗೆಗೆ ಜನ ಪರದಾಟುತ್ತಿದ್ದಾರೆ. ಫ್ಯಾನ್‌(Fan), ಏಸಿ(AC), ಕೂಲರ್‌(Cooler) ಇಲ್ಲದೆ  ದಿನ ಕಳೆಯೋದು ಕಷ್ಟವಾಗಿದೆ.  ಈ ಮಧ್ಯೆ  ರಾಯಚೂರಿನ (Raichuru) ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ (RTPS) ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆ(Electricity Crisis) ಎದುರಾಗುವ ಸಾಧ್ಯತೆಗಳು ಕಾಣಿಸುತಿದೆ.

ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಉಂಟಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್‌ಟಿಪಿಎಸ್‌ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ.

ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ ಸಮಸ್ಯೆಯಿಂದ ಘಟಕಗಳು ಬಂದ್ ಆಗಿದ್ದು, ಬೇಸಿಗೆಯಲ್ಲಿ ವಿಪರೀತ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

42 seconds ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

8 minutes ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

3 hours ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

4 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

9 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

13 hours ago