Advertisement
MIRROR FOCUS

ಜಲಕ್ಷಾಮದ ಜೊತೆಗೆ ವಿದ್ಯುತ್ ಕ್ಷಾಮ ಭೀತಿ | ರಾಯಚೂರು ಆರ್‌ಟಿಪಿಎಸ್‌ನ 4 ವಿದ್ಯುತ್ ಘಟಕಗಳು ಬಂದ್ |

Share

ಭೂಮಿ(Earth) ದಿನದಿಂದ ದಿನಕ್ಕೆ ಕಾದ ಕಾವಲಿಯಂತಾಗುತ್ತಿದೆ. ಎಲ್ಲೆಲ್ಲೂ ನೀರಿಗೆ ಕ್ಷಾಮ(Water Crisis) ಎದುರಾಗಿದೆ. ಬಿಸಿಲ ಧಗೆಗೆ ಜನ ಪರದಾಟುತ್ತಿದ್ದಾರೆ. ಫ್ಯಾನ್‌(Fan), ಏಸಿ(AC), ಕೂಲರ್‌(Cooler) ಇಲ್ಲದೆ  ದಿನ ಕಳೆಯೋದು ಕಷ್ಟವಾಗಿದೆ.  ಈ ಮಧ್ಯೆ  ರಾಯಚೂರಿನ (Raichuru) ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್‌ನ (RTPS) ನಾಲ್ಕು ಘಟಕಗಳು ಸ್ಥಗಿತವಾಗಿದ್ದು, ರಾಜ್ಯಕ್ಕೆ ವಿದ್ಯುತ್ ಕೊರತೆ(Electricity Crisis) ಎದುರಾಗುವ ಸಾಧ್ಯತೆಗಳು ಕಾಣಿಸುತಿದೆ.

ಬರಗಾಲ ಹಿನ್ನೆಲೆ ರಾಜ್ಯದಲ್ಲಿ ಈಗಾಗಲೇ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಈಗ ಬಿರು ಬೇಸಿಗೆಯಲ್ಲಿ ವಿದ್ಯುತ್ ಕ್ಷಾಮ ಸಹ ಎದುರಾಗುವ ಭೀತಿ ಉಂಟಾಗಿದೆ. ರಾಜ್ಯಕ್ಕೆ ಶೇ.40 ರಷ್ಟು ವಿದ್ಯುತ್ ಪೂರೈಸುವ ವಿದ್ಯುತ್ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆ ತಲೆದೂರಿದ್ದು, ಆರ್‌ಟಿಪಿಎಸ್‌ನ ಎಂಟು ಘಟಕಗಳಲ್ಲಿ ನಾಲ್ಕು ಘಟಕ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತಗೊಳಿಸಿವೆ.

ಬಾಯ್ಲರ್ ಟ್ಯೂಬ್ ಲೀಕೇಜ್ ಹಾಗೂ ಬಂಕ್ಲರ್ ಸಮಸ್ಯೆಯಿಂದ ಘಟಕಗಳು ಸ್ಥಗಿತಗೊಂಡಿವೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಕೇಂದ್ರದಲ್ಲಿ ಈಗ ಕೇವಲ 665 ಮೆಗಾ ವ್ಯಾಟ್ ಉತ್ಪಾದನೆಯಾಗುತ್ತಿದೆ. ವಿದ್ಯುತ್ ಕೇಂದ್ರದ 1,2,3 ಹಾಗೂ 6 ನೇ ಘಟಕ ಬಂದ್ ಆಗಿದ್ದು, ಬೇಸಿಗೆಯಲ್ಲಿ ಹೆಚ್ಚು ಒತ್ತಡ ಇರುವ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲೇ ಉತ್ಪಾದನೆ ಕುಂಠಿತವಾಗಿದೆ. ನೀರಿನ ಸಮಸ್ಯೆ ಬೆನ್ನಲ್ಲೆ ತಾಂತ್ರಿಕ ಸಮಸ್ಯೆಯಿಂದ ಘಟಕಗಳು ಬಂದ್ ಆಗಿದ್ದು, ಬೇಸಿಗೆಯಲ್ಲಿ ವಿಪರೀತ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

21 minutes ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago