ಸುದ್ದಿಗಳು

ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ಆಶ್ರಯದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹನುಮಗಿರಿ ಇವರಿಂದ ಯಕ್ಷಗಾನ ಬಯಲಾಟ ವೇದೋದ್ಧರಣ ಶಿವಪಂಚಾಕ್ಷರೀ ಮಹಿಮೆ ಯಕ್ಷಗಾನ  ನಡೆಯಿತು. ಈ ಸಂದರ್ಭ ಯಕ್ಷಗಾನ ಕಲಾವಿದ ಉಮೇಶ್‌ ಶೆಟ್ಟಿ ಉಬರಡ್ಕ ಅವರನ್ನು ಗೌರವಿಸಲಾಯಿತು.

Advertisement
Advertisement

ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಹನುಮಗಿರಿ ಮೇಳದ ಪ್ರಬಂಧಕ ಹರೀಶ್‌ ಬಳಂತಿಮೊಗರು,

, ಎಲ್ಲಾ ಕಲಾವಿದರು ಸಮಾಜದಲ್ಲಿ ಗುರುತಿಸಲ್ಪಡಬೇಕು. ಸಮಾಜವೂ ಕಲಾವಿದರನ್ನು ಗೌರವಿಸಬೇಕು. ಕಲಾವಿದರನ್ನು ಸನ್ಮಾನಿಸುವುದು ಉತ್ತಮ ಕೆಲಸ, ಒಳ್ಳೆಯ ಸಂದೇಶ ನೀಡುತ್ತದೆ. ಏಕೆಂದರೆ, ಕೆಲಸ ಮಾಡುವವರನ್ನು ಸಮಾಜ ಗುರುತಿಸುತ್ತದೆ ಎನ್ನುವುದು ತಿಳಿಸಬೇಕು. ಇದು ಅರ್ಜಿ ಹಾಕಿ ನೀಡುವ ಪ್ರಶಸ್ತಿ ಇಲ್ಲ. ಕಲಾಭಿಮಾನಿಗಳು ಕಲಾವಿದರನ್ನು ಗುರುತಿಸುವ ಕೆಲಸ. ಅದಕ್ಕಾಗಿಯೇ ಇಂತಹ ಗೌರವಗಳಿಗೆ ಮೌಲ್ಯ, ಮನ್ನಣೆ ಇರುತ್ತದೆ ಎಂದರು.

ಕಲಾಭಿಮಾನಿಗಳ ಗೌರವ ಸ್ವೀಕರಿಸಿದ ಕಲಾವಿದ ಉಮೇಶ್‌ ಶೆಟ್ಟಿ ಉಬರಡ್ಕ,ಒಬ್ಬ ಕಲಾವಿದ ರೂಪುಗೊಳ್ಳಲು ಎಲ್ಲರ ಸಹಕಾರ ಬೇಕು. ಎಲ್ಲರ ಪ್ರಿತಿಯಿಂದ ಮಾತ್ರವೇ ಕಲಾವಿದ ಬೆಳೆಯಲು ಸಾಧ್ಯ. ಕಲಾವಿದರ ಆಸ್ತಿ ಕಲಾಭಿಮಾನಿಗಳು. ಅಭಿಮಾನಕ್ಕೆ ಕಲಾವಿದ ಖುಷಿ ಪಡುತ್ತಾನೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ವಿಷ್ಣು ಪ್ರಸಾದ್‌ ಬರೆಕೆರೆ,  ಕಲೆಯ ಆರಾಧನೆ ಉತ್ತಮವಾದ ಕೆಲಸ. ಕಲಾವಿರನ್ನು ಗೌರವಿಸುವು ಕೂಡಾ ಉತ್ತಮ ಕೆಲಸ. ಕಲೋಪಾನೆ ನಡೆಯಬೇಕು ಎಂದರು.

ವೇದಿಕೆಯಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಸಂಘಟನೆಯ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ, ಪಿ ಎಸ್‌ ಚಂದ್ರಶೇಖರ‌ ಪುಚ್ಚಪ್ಪಾಡಿ, ‌ಗಂಗಾಧರ ಪುಚ್ಚಪ್ಪಾಡಿ, ವೆಂಕಟೇಶ ಪುಚ್ಚಪ್ಪಾಡಿ, ಸುಬ್ರಹ್ಮಣ್ಯ ಪ್ರಸಾದ ಚಣಿಲ, ಉದಯಕುಮಾರ್ ಕಮಿಲ, ಸತ್ಯನಾರಾಯಣ ಹೊನ್ನಾಡಿ, ಕೃಷ್ಣ ಭಟ್ ಹೊನ್ನಡಿ, ಸತ್ಯನಾರಾಯಣ ಮಾತೃಮಜಲು, ಮತ್ತಿತರರು ಉಪಸ್ಥಿತರಿದ್ದರು. ಅಪರ್ಣಾ ಪುಚ್ಚಪ್ಪಾಡಿ ನಿರೂಪಿಸಿದರು.

Advertisement

ಭಾಗವತರಾಗಿ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಚಿನ್ಮಯ ಭಟ್ ಕಲ್ಲಡ್ಕ, ಚೆಂಡೆ-ಮದ್ದಳೆಯಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್, ಚೈತನ್ಯಕೃಷ್ಣ ಪದ್ಯಾಣ, ಶ್ರೀಧರ ವಿಟ್ಲ, ಕೌಶಲ್ ರಾವ್ ಪುತ್ತಿಗೆ, ಚಕ್ರತಾಳದಲ್ಲಿ ನಿಶ್ವತ್ ಜೋಗಿ ಜೋಡುಕಲ್ಲು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

3 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

3 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

3 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

3 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

3 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

4 hours ago