ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ಆಶ್ರಯದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹನುಮಗಿರಿ ಇವರಿಂದ ಯಕ್ಷಗಾನ ಬಯಲಾಟ ವೇದೋದ್ಧರಣ ಶಿವಪಂಚಾಕ್ಷರೀ ಮಹಿಮೆ ಯಕ್ಷಗಾನ ನಡೆಯಿತು. ಈ ಸಂದರ್ಭ ಯಕ್ಷಗಾನ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ ಅವರನ್ನು ಗೌರವಿಸಲಾಯಿತು.
ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಹನುಮಗಿರಿ ಮೇಳದ ಪ್ರಬಂಧಕ ಹರೀಶ್ ಬಳಂತಿಮೊಗರು,
ಕಲಾಭಿಮಾನಿಗಳ ಗೌರವ ಸ್ವೀಕರಿಸಿದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ,ಒಬ್ಬ ಕಲಾವಿದ ರೂಪುಗೊಳ್ಳಲು ಎಲ್ಲರ ಸಹಕಾರ ಬೇಕು. ಎಲ್ಲರ ಪ್ರಿತಿಯಿಂದ ಮಾತ್ರವೇ ಕಲಾವಿದ ಬೆಳೆಯಲು ಸಾಧ್ಯ. ಕಲಾವಿದರ ಆಸ್ತಿ ಕಲಾಭಿಮಾನಿಗಳು. ಅಭಿಮಾನಕ್ಕೆ ಕಲಾವಿದ ಖುಷಿ ಪಡುತ್ತಾನೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ವಿಷ್ಣು ಪ್ರಸಾದ್ ಬರೆಕೆರೆ, ಕಲೆಯ ಆರಾಧನೆ ಉತ್ತಮವಾದ ಕೆಲಸ. ಕಲಾವಿರನ್ನು ಗೌರವಿಸುವು ಕೂಡಾ ಉತ್ತಮ ಕೆಲಸ. ಕಲೋಪಾನೆ ನಡೆಯಬೇಕು ಎಂದರು.
ವೇದಿಕೆಯಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಸಂಘಟನೆಯ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ, ಪಿ ಎಸ್ ಚಂದ್ರಶೇಖರ ಪುಚ್ಚಪ್ಪಾಡಿ, ಗಂಗಾಧರ ಪುಚ್ಚಪ್ಪಾಡಿ, ವೆಂಕಟೇಶ ಪುಚ್ಚಪ್ಪಾಡಿ, ಸುಬ್ರಹ್ಮಣ್ಯ ಪ್ರಸಾದ ಚಣಿಲ, ಉದಯಕುಮಾರ್ ಕಮಿಲ, ಸತ್ಯನಾರಾಯಣ ಹೊನ್ನಾಡಿ, ಕೃಷ್ಣ ಭಟ್ ಹೊನ್ನಡಿ, ಸತ್ಯನಾರಾಯಣ ಮಾತೃಮಜಲು, ಮತ್ತಿತರರು ಉಪಸ್ಥಿತರಿದ್ದರು. ಅಪರ್ಣಾ ಪುಚ್ಚಪ್ಪಾಡಿ ನಿರೂಪಿಸಿದರು.
ಭಾಗವತರಾಗಿ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಚಿನ್ಮಯ ಭಟ್ ಕಲ್ಲಡ್ಕ, ಚೆಂಡೆ-ಮದ್ದಳೆಯಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್, ಚೈತನ್ಯಕೃಷ್ಣ ಪದ್ಯಾಣ, ಶ್ರೀಧರ ವಿಟ್ಲ, ಕೌಶಲ್ ರಾವ್ ಪುತ್ತಿಗೆ, ಚಕ್ರತಾಳದಲ್ಲಿ ನಿಶ್ವತ್ ಜೋಗಿ ಜೋಡುಕಲ್ಲು ಇದ್ದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…