ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ಆಶ್ರಯದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹನುಮಗಿರಿ ಇವರಿಂದ ಯಕ್ಷಗಾನ ಬಯಲಾಟ ವೇದೋದ್ಧರಣ ಶಿವಪಂಚಾಕ್ಷರೀ ಮಹಿಮೆ ಯಕ್ಷಗಾನ ನಡೆಯಿತು. ಈ ಸಂದರ್ಭ ಯಕ್ಷಗಾನ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ ಅವರನ್ನು ಗೌರವಿಸಲಾಯಿತು.
ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಹನುಮಗಿರಿ ಮೇಳದ ಪ್ರಬಂಧಕ ಹರೀಶ್ ಬಳಂತಿಮೊಗರು,
ಕಲಾಭಿಮಾನಿಗಳ ಗೌರವ ಸ್ವೀಕರಿಸಿದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ,ಒಬ್ಬ ಕಲಾವಿದ ರೂಪುಗೊಳ್ಳಲು ಎಲ್ಲರ ಸಹಕಾರ ಬೇಕು. ಎಲ್ಲರ ಪ್ರಿತಿಯಿಂದ ಮಾತ್ರವೇ ಕಲಾವಿದ ಬೆಳೆಯಲು ಸಾಧ್ಯ. ಕಲಾವಿದರ ಆಸ್ತಿ ಕಲಾಭಿಮಾನಿಗಳು. ಅಭಿಮಾನಕ್ಕೆ ಕಲಾವಿದ ಖುಷಿ ಪಡುತ್ತಾನೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ವಿಷ್ಣು ಪ್ರಸಾದ್ ಬರೆಕೆರೆ, ಕಲೆಯ ಆರಾಧನೆ ಉತ್ತಮವಾದ ಕೆಲಸ. ಕಲಾವಿರನ್ನು ಗೌರವಿಸುವು ಕೂಡಾ ಉತ್ತಮ ಕೆಲಸ. ಕಲೋಪಾನೆ ನಡೆಯಬೇಕು ಎಂದರು.
ವೇದಿಕೆಯಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಸಂಘಟನೆಯ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ, ಪಿ ಎಸ್ ಚಂದ್ರಶೇಖರ ಪುಚ್ಚಪ್ಪಾಡಿ, ಗಂಗಾಧರ ಪುಚ್ಚಪ್ಪಾಡಿ, ವೆಂಕಟೇಶ ಪುಚ್ಚಪ್ಪಾಡಿ, ಸುಬ್ರಹ್ಮಣ್ಯ ಪ್ರಸಾದ ಚಣಿಲ, ಉದಯಕುಮಾರ್ ಕಮಿಲ, ಸತ್ಯನಾರಾಯಣ ಹೊನ್ನಾಡಿ, ಕೃಷ್ಣ ಭಟ್ ಹೊನ್ನಡಿ, ಸತ್ಯನಾರಾಯಣ ಮಾತೃಮಜಲು, ಮತ್ತಿತರರು ಉಪಸ್ಥಿತರಿದ್ದರು. ಅಪರ್ಣಾ ಪುಚ್ಚಪ್ಪಾಡಿ ನಿರೂಪಿಸಿದರು.
ಭಾಗವತರಾಗಿ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಚಿನ್ಮಯ ಭಟ್ ಕಲ್ಲಡ್ಕ, ಚೆಂಡೆ-ಮದ್ದಳೆಯಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್, ಚೈತನ್ಯಕೃಷ್ಣ ಪದ್ಯಾಣ, ಶ್ರೀಧರ ವಿಟ್ಲ, ಕೌಶಲ್ ರಾವ್ ಪುತ್ತಿಗೆ, ಚಕ್ರತಾಳದಲ್ಲಿ ನಿಶ್ವತ್ ಜೋಗಿ ಜೋಡುಕಲ್ಲು ಇದ್ದರು.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…