ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ಆಶ್ರಯದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹನುಮಗಿರಿ ಇವರಿಂದ ಯಕ್ಷಗಾನ ಬಯಲಾಟ ವೇದೋದ್ಧರಣ ಶಿವಪಂಚಾಕ್ಷರೀ ಮಹಿಮೆ ಯಕ್ಷಗಾನ ನಡೆಯಿತು. ಈ ಸಂದರ್ಭ ಯಕ್ಷಗಾನ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ ಅವರನ್ನು ಗೌರವಿಸಲಾಯಿತು.
ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಹನುಮಗಿರಿ ಮೇಳದ ಪ್ರಬಂಧಕ ಹರೀಶ್ ಬಳಂತಿಮೊಗರು,
ಕಲಾಭಿಮಾನಿಗಳ ಗೌರವ ಸ್ವೀಕರಿಸಿದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ,ಒಬ್ಬ ಕಲಾವಿದ ರೂಪುಗೊಳ್ಳಲು ಎಲ್ಲರ ಸಹಕಾರ ಬೇಕು. ಎಲ್ಲರ ಪ್ರಿತಿಯಿಂದ ಮಾತ್ರವೇ ಕಲಾವಿದ ಬೆಳೆಯಲು ಸಾಧ್ಯ. ಕಲಾವಿದರ ಆಸ್ತಿ ಕಲಾಭಿಮಾನಿಗಳು. ಅಭಿಮಾನಕ್ಕೆ ಕಲಾವಿದ ಖುಷಿ ಪಡುತ್ತಾನೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ವಿಷ್ಣು ಪ್ರಸಾದ್ ಬರೆಕೆರೆ, ಕಲೆಯ ಆರಾಧನೆ ಉತ್ತಮವಾದ ಕೆಲಸ. ಕಲಾವಿರನ್ನು ಗೌರವಿಸುವು ಕೂಡಾ ಉತ್ತಮ ಕೆಲಸ. ಕಲೋಪಾನೆ ನಡೆಯಬೇಕು ಎಂದರು.
ವೇದಿಕೆಯಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಸಂಘಟನೆಯ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ, ಪಿ ಎಸ್ ಚಂದ್ರಶೇಖರ ಪುಚ್ಚಪ್ಪಾಡಿ, ಗಂಗಾಧರ ಪುಚ್ಚಪ್ಪಾಡಿ, ವೆಂಕಟೇಶ ಪುಚ್ಚಪ್ಪಾಡಿ, ಸುಬ್ರಹ್ಮಣ್ಯ ಪ್ರಸಾದ ಚಣಿಲ, ಉದಯಕುಮಾರ್ ಕಮಿಲ, ಸತ್ಯನಾರಾಯಣ ಹೊನ್ನಾಡಿ, ಕೃಷ್ಣ ಭಟ್ ಹೊನ್ನಡಿ, ಸತ್ಯನಾರಾಯಣ ಮಾತೃಮಜಲು, ಮತ್ತಿತರರು ಉಪಸ್ಥಿತರಿದ್ದರು. ಅಪರ್ಣಾ ಪುಚ್ಚಪ್ಪಾಡಿ ನಿರೂಪಿಸಿದರು.
ಭಾಗವತರಾಗಿ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಚಿನ್ಮಯ ಭಟ್ ಕಲ್ಲಡ್ಕ, ಚೆಂಡೆ-ಮದ್ದಳೆಯಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್, ಚೈತನ್ಯಕೃಷ್ಣ ಪದ್ಯಾಣ, ಶ್ರೀಧರ ವಿಟ್ಲ, ಕೌಶಲ್ ರಾವ್ ಪುತ್ತಿಗೆ, ಚಕ್ರತಾಳದಲ್ಲಿ ನಿಶ್ವತ್ ಜೋಗಿ ಜೋಡುಕಲ್ಲು ಇದ್ದರು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…