Advertisement
ಸುದ್ದಿಗಳು

ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |

Share

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ಆಶ್ರಯದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹನುಮಗಿರಿ ಇವರಿಂದ ಯಕ್ಷಗಾನ ಬಯಲಾಟ ವೇದೋದ್ಧರಣ ಶಿವಪಂಚಾಕ್ಷರೀ ಮಹಿಮೆ ಯಕ್ಷಗಾನ  ನಡೆಯಿತು. ಈ ಸಂದರ್ಭ ಯಕ್ಷಗಾನ ಕಲಾವಿದ ಉಮೇಶ್‌ ಶೆಟ್ಟಿ ಉಬರಡ್ಕ ಅವರನ್ನು ಗೌರವಿಸಲಾಯಿತು.

ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕ್ಷೇತ್ರ ಹನುಮಗಿರಿ ಮೇಳದ ಪ್ರಬಂಧಕ ಹರೀಶ್‌ ಬಳಂತಿಮೊಗರು,

, ಎಲ್ಲಾ ಕಲಾವಿದರು ಸಮಾಜದಲ್ಲಿ ಗುರುತಿಸಲ್ಪಡಬೇಕು. ಸಮಾಜವೂ ಕಲಾವಿದರನ್ನು ಗೌರವಿಸಬೇಕು. ಕಲಾವಿದರನ್ನು ಸನ್ಮಾನಿಸುವುದು ಉತ್ತಮ ಕೆಲಸ, ಒಳ್ಳೆಯ ಸಂದೇಶ ನೀಡುತ್ತದೆ. ಏಕೆಂದರೆ, ಕೆಲಸ ಮಾಡುವವರನ್ನು ಸಮಾಜ ಗುರುತಿಸುತ್ತದೆ ಎನ್ನುವುದು ತಿಳಿಸಬೇಕು. ಇದು ಅರ್ಜಿ ಹಾಕಿ ನೀಡುವ ಪ್ರಶಸ್ತಿ ಇಲ್ಲ. ಕಲಾಭಿಮಾನಿಗಳು ಕಲಾವಿದರನ್ನು ಗುರುತಿಸುವ ಕೆಲಸ. ಅದಕ್ಕಾಗಿಯೇ ಇಂತಹ ಗೌರವಗಳಿಗೆ ಮೌಲ್ಯ, ಮನ್ನಣೆ ಇರುತ್ತದೆ ಎಂದರು.

ಕಲಾಭಿಮಾನಿಗಳ ಗೌರವ ಸ್ವೀಕರಿಸಿದ ಕಲಾವಿದ ಉಮೇಶ್‌ ಶೆಟ್ಟಿ ಉಬರಡ್ಕ,ಒಬ್ಬ ಕಲಾವಿದ ರೂಪುಗೊಳ್ಳಲು ಎಲ್ಲರ ಸಹಕಾರ ಬೇಕು. ಎಲ್ಲರ ಪ್ರಿತಿಯಿಂದ ಮಾತ್ರವೇ ಕಲಾವಿದ ಬೆಳೆಯಲು ಸಾಧ್ಯ. ಕಲಾವಿದರ ಆಸ್ತಿ ಕಲಾಭಿಮಾನಿಗಳು. ಅಭಿಮಾನಕ್ಕೆ ಕಲಾವಿದ ಖುಷಿ ಪಡುತ್ತಾನೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ವಿಷ್ಣು ಪ್ರಸಾದ್‌ ಬರೆಕೆರೆ,  ಕಲೆಯ ಆರಾಧನೆ ಉತ್ತಮವಾದ ಕೆಲಸ. ಕಲಾವಿರನ್ನು ಗೌರವಿಸುವು ಕೂಡಾ ಉತ್ತಮ ಕೆಲಸ. ಕಲೋಪಾನೆ ನಡೆಯಬೇಕು ಎಂದರು.

ವೇದಿಕೆಯಲ್ಲಿ ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಸಂಘಟನೆಯ ಹರಿಸುಬ್ರಹ್ಮಣ್ಯ ಪುಚ್ಚಪ್ಪಾಡಿ, ಪಿ ಎಸ್‌ ಚಂದ್ರಶೇಖರ‌ ಪುಚ್ಚಪ್ಪಾಡಿ, ‌ಗಂಗಾಧರ ಪುಚ್ಚಪ್ಪಾಡಿ, ವೆಂಕಟೇಶ ಪುಚ್ಚಪ್ಪಾಡಿ, ಸುಬ್ರಹ್ಮಣ್ಯ ಪ್ರಸಾದ ಚಣಿಲ, ಉದಯಕುಮಾರ್ ಕಮಿಲ, ಸತ್ಯನಾರಾಯಣ ಹೊನ್ನಾಡಿ, ಕೃಷ್ಣ ಭಟ್ ಹೊನ್ನಡಿ, ಸತ್ಯನಾರಾಯಣ ಮಾತೃಮಜಲು, ಮತ್ತಿತರರು ಉಪಸ್ಥಿತರಿದ್ದರು. ಅಪರ್ಣಾ ಪುಚ್ಚಪ್ಪಾಡಿ ನಿರೂಪಿಸಿದರು.

ಭಾಗವತರಾಗಿ ಗಾನಸುರಭಿ ರವಿಚಂದ್ರ ಕನ್ನಡಿಕಟ್ಟೆ, ಚಿನ್ಮಯ ಭಟ್ ಕಲ್ಲಡ್ಕ, ಚೆಂಡೆ-ಮದ್ದಳೆಯಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್, ಚೈತನ್ಯಕೃಷ್ಣ ಪದ್ಯಾಣ, ಶ್ರೀಧರ ವಿಟ್ಲ, ಕೌಶಲ್ ರಾವ್ ಪುತ್ತಿಗೆ, ಚಕ್ರತಾಳದಲ್ಲಿ ನಿಶ್ವತ್ ಜೋಗಿ ಜೋಡುಕಲ್ಲು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

4 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

12 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

14 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

19 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

21 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago