ಮುಳಿಯ ಜ್ಯುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ

June 18, 2024
8:32 PM

ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.

Advertisement
Advertisement

ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ಅಗ್ನಿವೀರ ಭವಿಶ್ ತಾರಿಗುಡ್ಡೆ ಮಾತನಾಡಿ ಸೇನೆಯಲ್ಲಿ ದೇಶ ಸೇವೆಯನ್ನು ಮಾಡಬೇಕೆಂಬ ಕನಸು ಸಣ್ಣದರಲ್ಲೇ ಇತ್ತು. ಆರ್ಥಿಕ ಕಷ್ಟ ಇದ್ದಕಾರಣದಿಂದ ಬೆಳಗ್ಗಿನ ಜಾವ ತರಬೇತಿಯಲ್ಲಿ ಭಾಗವಹಿಸಿ, ಕಾಲೇಜು ಶಿಕ್ಷಣವನ್ನು ಪಡೆದು ರಾತ್ರಿ ಬಾರ್ ನಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದೆ. ಈಗ ಸೇನೆಯಲ್ಲಿ ಅವಕಾಶ ಸಿಕ್ಕಿದ್ದು, ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವ ಜವಾಬ್ದಾರಿ ಇದೆ ಎಂದು ತಿಳಿಸಿದರು.

ಅಗ್ನಿವೀರನಾಗಿ ಆಯ್ಕೆಯಾದ ಭವಿಶ್ ತಾರಿಗುಡ್ಡೆ ಅವರನ್ನು ಧನ ಸಹಾಯ ನೀಡಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

3 ಸಾವಿರಕ್ಕೂ ಅಧಿಕ ಗಿಡಗಳನ್ನು ವಿತರಣೆ ಮಾಡುವ ಜತೆಗೆ ಗೋವಿಹಾರ ದಾಮದಲ್ಲಿ ಗಿಡಗಳನ್ನು ಸಿಬ್ಬಂದಿಗಳಲ್ಲಿ ನೆಡಿಸುವ ಮೂಲಕ ಪರಿಸರ ಕಾಳಜಿಯನ್ನು ತೋರಿಸಿದೆ. ವಿವಿಧ ಸಾಮಾಜಿಕ ಚಟುವಣೆಯಲ್ಲಿ ಮುಂಚೂಣಿಯಲ್ಲಿರುವ ಪರಿಶುದ್ಧವಾದ ಚಿನ್ನಾಭರಣಕ್ಕೆ ಹೆಸರುವಾಸಿಯಾಗಿರುವ ಮುಳಿಯ ಜ್ಯುವೆಲ್ಸ್ ಈಗ ಅಗ್ನಿಮೀರನಾಗಿ ಆಯ್ಕೆಯಾದವರನ್ನು ಗೌರವಿಸುವ ಮೂಲಕ ಇನ್ನಷ್ಟು ಮಂದಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ಕೆ ಮುಂದಾಗಿದೆ.

Advertisement

ತಾಯಿ ವೀಣಾ, ತಂದೆ ಬಾಲಕೃಷ್ಣ, ಸಹೋದರಿ ಭವಿತಾ, ಪುತ್ತೂರು ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ಲೋರ್ ಮೆನೇಜರ್ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!
May 20, 2025
8:11 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |
May 20, 2025
8:03 AM
by: The Rural Mirror ಸುದ್ದಿಜಾಲ
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ
May 19, 2025
8:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group