Advertisement
ಸುದ್ದಿಗಳು

ಮುಳಿಯ ಜ್ಯುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ

Share

ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.

Advertisement
Advertisement

ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

Advertisement

ಸನ್ಮಾನ ಸ್ವೀಕರಿಸಿದ ಅಗ್ನಿವೀರ ಭವಿಶ್ ತಾರಿಗುಡ್ಡೆ ಮಾತನಾಡಿ ಸೇನೆಯಲ್ಲಿ ದೇಶ ಸೇವೆಯನ್ನು ಮಾಡಬೇಕೆಂಬ ಕನಸು ಸಣ್ಣದರಲ್ಲೇ ಇತ್ತು. ಆರ್ಥಿಕ ಕಷ್ಟ ಇದ್ದಕಾರಣದಿಂದ ಬೆಳಗ್ಗಿನ ಜಾವ ತರಬೇತಿಯಲ್ಲಿ ಭಾಗವಹಿಸಿ, ಕಾಲೇಜು ಶಿಕ್ಷಣವನ್ನು ಪಡೆದು ರಾತ್ರಿ ಬಾರ್ ನಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದೆ. ಈಗ ಸೇನೆಯಲ್ಲಿ ಅವಕಾಶ ಸಿಕ್ಕಿದ್ದು, ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವ ಜವಾಬ್ದಾರಿ ಇದೆ ಎಂದು ತಿಳಿಸಿದರು.

ಅಗ್ನಿವೀರನಾಗಿ ಆಯ್ಕೆಯಾದ ಭವಿಶ್ ತಾರಿಗುಡ್ಡೆ ಅವರನ್ನು ಧನ ಸಹಾಯ ನೀಡಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

Advertisement

3 ಸಾವಿರಕ್ಕೂ ಅಧಿಕ ಗಿಡಗಳನ್ನು ವಿತರಣೆ ಮಾಡುವ ಜತೆಗೆ ಗೋವಿಹಾರ ದಾಮದಲ್ಲಿ ಗಿಡಗಳನ್ನು ಸಿಬ್ಬಂದಿಗಳಲ್ಲಿ ನೆಡಿಸುವ ಮೂಲಕ ಪರಿಸರ ಕಾಳಜಿಯನ್ನು ತೋರಿಸಿದೆ. ವಿವಿಧ ಸಾಮಾಜಿಕ ಚಟುವಣೆಯಲ್ಲಿ ಮುಂಚೂಣಿಯಲ್ಲಿರುವ ಪರಿಶುದ್ಧವಾದ ಚಿನ್ನಾಭರಣಕ್ಕೆ ಹೆಸರುವಾಸಿಯಾಗಿರುವ ಮುಳಿಯ ಜ್ಯುವೆಲ್ಸ್ ಈಗ ಅಗ್ನಿಮೀರನಾಗಿ ಆಯ್ಕೆಯಾದವರನ್ನು ಗೌರವಿಸುವ ಮೂಲಕ ಇನ್ನಷ್ಟು ಮಂದಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ಕೆ ಮುಂದಾಗಿದೆ.

ತಾಯಿ ವೀಣಾ, ತಂದೆ ಬಾಲಕೃಷ್ಣ, ಸಹೋದರಿ ಭವಿತಾ, ಪುತ್ತೂರು ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ಲೋರ್ ಮೆನೇಜರ್ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸ್ವಪ್ರಯತ್ನವೊಂದೇ ಯಶಸ್ಸಿನ ಹೆದ್ದಾರಿ

ವಿದ್ಯಾರ್ಥಿಗಳಲ್ಲಿ ಸುಖದ ಅಪೇಕ್ಷೆ, ಆಲಸ್ಯ ಮತ್ತು ಅಲ್ಪತೃಪ್ತಿಯ ವಿದ್ಯಮಾನ ವ್ಯಾಪಕವಾಗುತ್ತಿದೆ? ಇದಕ್ಕೆ ಕಾರಣವೇನೆಂದರೆ…

4 hours ago

ಭಾರೀ ಮಳೆ ಹಿನ್ನೆಲೆ | ಜೂ. 27ರಂದು ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂ.27ರಂದು ಜಿಲ್ಲೆಯ ಎಲ್ಲ ಅಂಗನವಾಡಿ,…

6 hours ago

Karnataka Weather | 26-06-2024 | ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆ | ಉಳಿದೆಡೆ ಸಾಮಾನ್ಯ ಮಳೆ |

ಮುಂಗಾರು ಚುರುಕಾಗಿದ್ದು ಈಗಿನ ಪ್ರಕಾರ ಜೂನ್ 29ರಿಂದ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ…

10 hours ago

ಪರೀಕ್ಷಾ ಅಕ್ರಮಗಳು.. | ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ…

ಭಾರತ(India) ಈ ಕ್ಷಣದಲ್ಲಿ, ಅಂತರಾಷ್ಟ್ರೀಯ(International) ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ(Developing) ಹೊಂದುತ್ತಿದೆ,…

11 hours ago

ರೈತರಿಗೋಸ್ಕರ ಹಾಲಿನ ದರ ಪರಿಷ್ಕರಣೆ | ದರ ಹೆಚ್ಚಳದ ಲಾಭ ರೈತರಿಗೆ ಸಿಗಲಿದೆ | ಡಿಸಿಎಂ ಡಿಕೆ ಶಿವಕುಮಾರ್

ಹಾಲಿನ ದರ ಏರಿಕೆಯಿಂದ ರೈತರಿಗೂ ಲಾಭದ ಪಾಲು ಸಿಗಲಿದೆ, ಸಂಕಷ್ಟದಲ್ಲಿರುವ ಹೈನುಗಾರರಿಗೆ ನೆರವಾಗಲು…

12 hours ago

ಲೋಕಸಭೆಯ ಸ್ಪೀಕರ್‌ ಆಗಿ 2 ನೇ ಬಾರಿಗೆ ಓಂ ಬಿರ್ಲಾ ಆಯ್ಕೆ | ಚುನಾವಣೆ ಮೂಲಕ ನಡೆದ ಸಭಾಪತಿ ಆಯ್ಕೆ |

ಕಳೆದ ಒಂದು ವಾರದಿಂದ ಭಾರಿ ಕುತೂಹಲ ಮೂಡಿಸಿದ್ದ ಲೋಕಸಭೆ ಸ್ಪೀಕರ್‌(Lok sabha speaker)…

12 hours ago