Advertisement
ಸುದ್ದಿಗಳು

ಮುಳಿಯ ಜ್ಯುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ

Share

ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.

ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ಅಗ್ನಿವೀರ ಭವಿಶ್ ತಾರಿಗುಡ್ಡೆ ಮಾತನಾಡಿ ಸೇನೆಯಲ್ಲಿ ದೇಶ ಸೇವೆಯನ್ನು ಮಾಡಬೇಕೆಂಬ ಕನಸು ಸಣ್ಣದರಲ್ಲೇ ಇತ್ತು. ಆರ್ಥಿಕ ಕಷ್ಟ ಇದ್ದಕಾರಣದಿಂದ ಬೆಳಗ್ಗಿನ ಜಾವ ತರಬೇತಿಯಲ್ಲಿ ಭಾಗವಹಿಸಿ, ಕಾಲೇಜು ಶಿಕ್ಷಣವನ್ನು ಪಡೆದು ರಾತ್ರಿ ಬಾರ್ ನಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದೆ. ಈಗ ಸೇನೆಯಲ್ಲಿ ಅವಕಾಶ ಸಿಕ್ಕಿದ್ದು, ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವ ಜವಾಬ್ದಾರಿ ಇದೆ ಎಂದು ತಿಳಿಸಿದರು.

ಅಗ್ನಿವೀರನಾಗಿ ಆಯ್ಕೆಯಾದ ಭವಿಶ್ ತಾರಿಗುಡ್ಡೆ ಅವರನ್ನು ಧನ ಸಹಾಯ ನೀಡಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

3 ಸಾವಿರಕ್ಕೂ ಅಧಿಕ ಗಿಡಗಳನ್ನು ವಿತರಣೆ ಮಾಡುವ ಜತೆಗೆ ಗೋವಿಹಾರ ದಾಮದಲ್ಲಿ ಗಿಡಗಳನ್ನು ಸಿಬ್ಬಂದಿಗಳಲ್ಲಿ ನೆಡಿಸುವ ಮೂಲಕ ಪರಿಸರ ಕಾಳಜಿಯನ್ನು ತೋರಿಸಿದೆ. ವಿವಿಧ ಸಾಮಾಜಿಕ ಚಟುವಣೆಯಲ್ಲಿ ಮುಂಚೂಣಿಯಲ್ಲಿರುವ ಪರಿಶುದ್ಧವಾದ ಚಿನ್ನಾಭರಣಕ್ಕೆ ಹೆಸರುವಾಸಿಯಾಗಿರುವ ಮುಳಿಯ ಜ್ಯುವೆಲ್ಸ್ ಈಗ ಅಗ್ನಿಮೀರನಾಗಿ ಆಯ್ಕೆಯಾದವರನ್ನು ಗೌರವಿಸುವ ಮೂಲಕ ಇನ್ನಷ್ಟು ಮಂದಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ಕೆ ಮುಂದಾಗಿದೆ.

ತಾಯಿ ವೀಣಾ, ತಂದೆ ಬಾಲಕೃಷ್ಣ, ಸಹೋದರಿ ಭವಿತಾ, ಪುತ್ತೂರು ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ಲೋರ್ ಮೆನೇಜರ್ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

1 hour ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

2 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

2 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

6 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

6 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

17 hours ago