Advertisement
ಸುದ್ದಿಗಳು

ಮುಳಿಯ ಜ್ಯುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ

Share

ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು.

ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ಅಗ್ನಿವೀರ ಭವಿಶ್ ತಾರಿಗುಡ್ಡೆ ಮಾತನಾಡಿ ಸೇನೆಯಲ್ಲಿ ದೇಶ ಸೇವೆಯನ್ನು ಮಾಡಬೇಕೆಂಬ ಕನಸು ಸಣ್ಣದರಲ್ಲೇ ಇತ್ತು. ಆರ್ಥಿಕ ಕಷ್ಟ ಇದ್ದಕಾರಣದಿಂದ ಬೆಳಗ್ಗಿನ ಜಾವ ತರಬೇತಿಯಲ್ಲಿ ಭಾಗವಹಿಸಿ, ಕಾಲೇಜು ಶಿಕ್ಷಣವನ್ನು ಪಡೆದು ರಾತ್ರಿ ಬಾರ್ ನಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದೆ. ಈಗ ಸೇನೆಯಲ್ಲಿ ಅವಕಾಶ ಸಿಕ್ಕಿದ್ದು, ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುವ ಜವಾಬ್ದಾರಿ ಇದೆ ಎಂದು ತಿಳಿಸಿದರು.

ಅಗ್ನಿವೀರನಾಗಿ ಆಯ್ಕೆಯಾದ ಭವಿಶ್ ತಾರಿಗುಡ್ಡೆ ಅವರನ್ನು ಧನ ಸಹಾಯ ನೀಡಿ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

3 ಸಾವಿರಕ್ಕೂ ಅಧಿಕ ಗಿಡಗಳನ್ನು ವಿತರಣೆ ಮಾಡುವ ಜತೆಗೆ ಗೋವಿಹಾರ ದಾಮದಲ್ಲಿ ಗಿಡಗಳನ್ನು ಸಿಬ್ಬಂದಿಗಳಲ್ಲಿ ನೆಡಿಸುವ ಮೂಲಕ ಪರಿಸರ ಕಾಳಜಿಯನ್ನು ತೋರಿಸಿದೆ. ವಿವಿಧ ಸಾಮಾಜಿಕ ಚಟುವಣೆಯಲ್ಲಿ ಮುಂಚೂಣಿಯಲ್ಲಿರುವ ಪರಿಶುದ್ಧವಾದ ಚಿನ್ನಾಭರಣಕ್ಕೆ ಹೆಸರುವಾಸಿಯಾಗಿರುವ ಮುಳಿಯ ಜ್ಯುವೆಲ್ಸ್ ಈಗ ಅಗ್ನಿಮೀರನಾಗಿ ಆಯ್ಕೆಯಾದವರನ್ನು ಗೌರವಿಸುವ ಮೂಲಕ ಇನ್ನಷ್ಟು ಮಂದಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ಕೆ ಮುಂದಾಗಿದೆ.

ತಾಯಿ ವೀಣಾ, ತಂದೆ ಬಾಲಕೃಷ್ಣ, ಸಹೋದರಿ ಭವಿತಾ, ಪುತ್ತೂರು ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಪ್ಲೋರ್ ಮೆನೇಜರ್ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

12 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

19 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

19 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

1 day ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 day ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

2 days ago