Advertisement
ಸುದ್ದಿಗಳು

ನಿವೃತ್ತ ಶಿಕ್ಷಕರಿಗೆ ಅಭಿವಂದನೆ | ಸೈನಿಕರು ದೇಶ ರಕ್ಷಿಸಿದರೆ ಶಿಕ್ಷಕರು ದೇಶ ಕಟ್ಟುವವರು : ಟಿ.ನಾರಾಯಣ ಭಟ್ |

Share

ಪುತ್ತೂರಿನ ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಕೆ.ಆರ್. ಹಾಗೂ ಅವರ ಪ್ರತಿನಿಧಿಗಳ ಬಳಗದಿಂದ ಪುತ್ತೂರು ಹಾಗೂ ಕಡಬ ತಾಲೂಕಿನ ನಿವೃತ್ತ ಶಿಕ್ಷಕರಿಗೆ ‘ಗುರುವಂದನಾ ಕಾರ್ಯಕ್ರಮ’ ನಗರದ ಸೈನಿಕ ಭವನದಲ್ಲಿ ಗುರುವಾರ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ. ನಾರಾಯಣ ಭಟ್ ರಾಮಕುಂಜ ಮಾತನಾಡಿ ಸೈನಿಕರು ದೇಶ ರಕ್ಷಿಸುವವರಾದರೆ ಶಿಕ್ಷಕರು ರಾಷ್ಟ್ರ ಕಟ್ಟುವವರು ಎಂದರಲ್ಲದೆ ಜೀವ ವಿಮಾ ನಿಗಮ ಬದುಕಿಗೆ ಭದ್ರತೆ ಒದಗಿಸುವ ಕಾರ್ಯ ಮಾಡುತ್ತದೆ. ನಾವು ತೊಡಗಿಸಿದ ಹಣ ನಮಗೂ ಸುಭದ್ರತೆ ನೀಡುವುದರೊಂದಿಗೆ ದೇಶದ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಜೀವವಿಮಾ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಕೆ.ಆರ್. ಅವರು ಮಾತನಾಡಿ ಉತ್ತಮ ಸಮಾಜಕ್ಕೆ ಕಾರಣರಾದ ನಿವೃತ್ತ ಶಿಕ್ಷಕರನ್ನು ಗೌರವಿಸುವುದು ಪುಣ್ಯಕಾರ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರದ ಭಾರತೀಯ ಜೀವ ವಿಮಾ ನಿಗಮದ ಮುಖ್ಯ ಪ್ರಬಂಧಕ ಬಾಲಕೃಷ್ಣ ಡಿ. ಮಾತನಾಡಿ ದೇಶದಲ್ಲಿ ಅತಿ ದೊಡ್ಡ ಸಂಖ್ಯೆಯಲ್ಲಿರುವ ಶಿಕ್ಷಕರ ಸಮೂಹ ಎಲ್.ಐ.ಸಿ ಸಂಸ್ಥೆಯೊಂದಿಗೆ ನಿಕಟ ಸಂಪರ್ಕ ಹೊಂದಿದೆ. ಎಲ್.ಐ.ಸಿ ಎಂಬುದು ಸಮಾಜಕ್ಕೆ ಆರ್ಥಿಕ ಭದ್ರತೆ ನೀಡುವ ಸಂಸ್ಥೆ. ಸದಾ ಉತ್ತಮ ಸೇವೆಯೊಂದಿಗೆ ಜೀವವಿಮಾ ಪ್ರತಿನಿಧಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಶುಭಕೋರಿದರು. ಈ ಸಂದರ್ಭದಲ್ಲಿ ಭಾರತೀಯ ಜೀವ ವಿಮಾ ನಿಗಮದ ಉಪಪ್ರಬಂಧಕ ಗುರುರಾಜ್ ಎಂ.ಯು. ಭಾರತೀಯ ಜೀವ ವಿಮಾ ನಿಗಮದಲ್ಲಿ ಹೂಡಿಕೆ ಹಾಗೂ ಉಳಿತಾಯ ಯೋಜನೆಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ 35 ಮಂದಿ ವಿಶ್ರಾಂತ ಶಿಕ್ಷಕರಿಗೆ “ಗುರುವಂದನೆ” ಸಲ್ಲಿಸಲಾಯಿತು. ಸನ್ಮಾನ ಸ್ವೀಕರಿಸಿದ ನಿವೃತ್ತ ಶಿಕ್ಷಕರಲ್ಲಿ ಒಬ್ಬರಾದ ಉಪ್ಪಿನಂಗಡಿ ಮಾದರಿ ಶಾಲೆಯ ಪದವೀಧರೇತರ ಮುಖ್ಯ ಶಿಕ್ಷಕಿ ದೇವಕಿ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈಯವರು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.

ಜೀವವಿಮಾ ಪ್ರತಿನಿಧಿ ನಾರಾಯಣ ಗೌಡ ಸ್ವಾಗತಿಸಿದರು. ಪ್ರತಿನಿಧಿ ಆನಂದ ಗೌಡˌ ರಾಮಕುಂಜ ವಂದಿಸಿದರು. ನಿವೃತ್ತ ಮುಖ್ಯ ಶಿಕ್ಷಕಿ ಹಾಗೂ ಪ್ರಸ್ತುತ ಜೀವವಿಮಾ ಪ್ರತಿನಿಧಿ ಯಶೋದಾ ಕೆ.ಎಸ್. ಮತ್ತು ಪ್ರತಿನಿಧಿ ಶುಕಲತಾ  ಕಾರ್ಯಕ್ರಮ ನಿರ್ವಹಿಸಿದರು. ಪ್ರತಿನಿಧಿಗಳಾದ ವಿದ್ಯಾˌ ಪ್ರೇಮಾˌ ರಾಘವೇಂದ್ರˌ ಸುಬ್ರಹ್ಮಣ್ಯ ಭಟ್, ವಿಷ್ಣುಭಟ್, ವಸಂತಗೌಡ, ಪ್ರಶಾಂತ ಭಂಡಾರಿ, ಪ್ರಸಾದ್ ಬಿ, ಸಂಧ್ಯಾ ಬಿ, ಅನುಷ ಹಾಗೂ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಕೆ.ಆರ್. ಬಳಗದ ಪ್ರತಿನಿಧಿ ಮಿತ್ರರು ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

19 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago