Advertisement
ಸುದ್ದಿಗಳು

ನಿವೃತ್ತ ಶಿಕ್ಷಕರಿಗೆ ಅಭಿವಂದನೆ | ಸೈನಿಕರು ದೇಶ ರಕ್ಷಿಸಿದರೆ ಶಿಕ್ಷಕರು ದೇಶ ಕಟ್ಟುವವರು : ಟಿ.ನಾರಾಯಣ ಭಟ್ |

Share

ಪುತ್ತೂರಿನ ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಕೆ.ಆರ್. ಹಾಗೂ ಅವರ ಪ್ರತಿನಿಧಿಗಳ ಬಳಗದಿಂದ ಪುತ್ತೂರು ಹಾಗೂ ಕಡಬ ತಾಲೂಕಿನ ನಿವೃತ್ತ ಶಿಕ್ಷಕರಿಗೆ ‘ಗುರುವಂದನಾ ಕಾರ್ಯಕ್ರಮ’ ನಗರದ ಸೈನಿಕ ಭವನದಲ್ಲಿ ಗುರುವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಟಿ. ನಾರಾಯಣ ಭಟ್ ರಾಮಕುಂಜ ಮಾತನಾಡಿ ಸೈನಿಕರು ದೇಶ ರಕ್ಷಿಸುವವರಾದರೆ ಶಿಕ್ಷಕರು ರಾಷ್ಟ್ರ ಕಟ್ಟುವವರು ಎಂದರಲ್ಲದೆ ಜೀವ ವಿಮಾ ನಿಗಮ ಬದುಕಿಗೆ ಭದ್ರತೆ ಒದಗಿಸುವ ಕಾರ್ಯ ಮಾಡುತ್ತದೆ. ನಾವು ತೊಡಗಿಸಿದ ಹಣ ನಮಗೂ ಸುಭದ್ರತೆ ನೀಡುವುದರೊಂದಿಗೆ ದೇಶದ ಮೂಲಭೂತ ಸೌಕರ್ಯ ಹಾಗೂ ಅಭಿವೃದ್ಧಿಗೂ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಜೀವವಿಮಾ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಕೆ.ಆರ್. ಅವರು ಮಾತನಾಡಿ ಉತ್ತಮ ಸಮಾಜಕ್ಕೆ ಕಾರಣರಾದ ನಿವೃತ್ತ ಶಿಕ್ಷಕರನ್ನು ಗೌರವಿಸುವುದು ಪುಣ್ಯಕಾರ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರದ ಭಾರತೀಯ ಜೀವ ವಿಮಾ ನಿಗಮದ ಮುಖ್ಯ ಪ್ರಬಂಧಕ ಬಾಲಕೃಷ್ಣ ಡಿ. ಮಾತನಾಡಿ ದೇಶದಲ್ಲಿ ಅತಿ ದೊಡ್ಡ ಸಂಖ್ಯೆಯಲ್ಲಿರುವ ಶಿಕ್ಷಕರ ಸಮೂಹ ಎಲ್.ಐ.ಸಿ ಸಂಸ್ಥೆಯೊಂದಿಗೆ ನಿಕಟ ಸಂಪರ್ಕ ಹೊಂದಿದೆ. ಎಲ್.ಐ.ಸಿ ಎಂಬುದು ಸಮಾಜಕ್ಕೆ ಆರ್ಥಿಕ ಭದ್ರತೆ ನೀಡುವ ಸಂಸ್ಥೆ. ಸದಾ ಉತ್ತಮ ಸೇವೆಯೊಂದಿಗೆ ಜೀವವಿಮಾ ಪ್ರತಿನಿಧಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಶುಭಕೋರಿದರು. ಈ ಸಂದರ್ಭದಲ್ಲಿ ಭಾರತೀಯ ಜೀವ ವಿಮಾ ನಿಗಮದ ಉಪಪ್ರಬಂಧಕ ಗುರುರಾಜ್ ಎಂ.ಯು. ಭಾರತೀಯ ಜೀವ ವಿಮಾ ನಿಗಮದಲ್ಲಿ ಹೂಡಿಕೆ ಹಾಗೂ ಉಳಿತಾಯ ಯೋಜನೆಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ 35 ಮಂದಿ ವಿಶ್ರಾಂತ ಶಿಕ್ಷಕರಿಗೆ “ಗುರುವಂದನೆ” ಸಲ್ಲಿಸಲಾಯಿತು. ಸನ್ಮಾನ ಸ್ವೀಕರಿಸಿದ ನಿವೃತ್ತ ಶಿಕ್ಷಕರಲ್ಲಿ ಒಬ್ಬರಾದ ಉಪ್ಪಿನಂಗಡಿ ಮಾದರಿ ಶಾಲೆಯ ಪದವೀಧರೇತರ ಮುಖ್ಯ ಶಿಕ್ಷಕಿ ದೇವಕಿ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈಯವರು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.

ಜೀವವಿಮಾ ಪ್ರತಿನಿಧಿ ನಾರಾಯಣ ಗೌಡ ಸ್ವಾಗತಿಸಿದರು. ಪ್ರತಿನಿಧಿ ಆನಂದ ಗೌಡˌ ರಾಮಕುಂಜ ವಂದಿಸಿದರು. ನಿವೃತ್ತ ಮುಖ್ಯ ಶಿಕ್ಷಕಿ ಹಾಗೂ ಪ್ರಸ್ತುತ ಜೀವವಿಮಾ ಪ್ರತಿನಿಧಿ ಯಶೋದಾ ಕೆ.ಎಸ್. ಮತ್ತು ಪ್ರತಿನಿಧಿ ಶುಕಲತಾ  ಕಾರ್ಯಕ್ರಮ ನಿರ್ವಹಿಸಿದರು. ಪ್ರತಿನಿಧಿಗಳಾದ ವಿದ್ಯಾˌ ಪ್ರೇಮಾˌ ರಾಘವೇಂದ್ರˌ ಸುಬ್ರಹ್ಮಣ್ಯ ಭಟ್, ವಿಷ್ಣುಭಟ್, ವಸಂತಗೌಡ, ಪ್ರಶಾಂತ ಭಂಡಾರಿ, ಪ್ರಸಾದ್ ಬಿ, ಸಂಧ್ಯಾ ಬಿ, ಅನುಷ ಹಾಗೂ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣ ಕೆ.ಆರ್. ಬಳಗದ ಪ್ರತಿನಿಧಿ ಮಿತ್ರರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

14 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago