Advertisement
ಸುದ್ದಿಗಳು

ವಿಸ್ಮಯ ಜಗತ್ತು | ಗಂಡು ಮೊಸಳೆಯ ಸಹಾಯವಿಲ್ಲದೆ ಮೊಟ್ಟೆ ಇಟ್ಟ ಹೆಣ್ಣು ಮೊಸಳೆ |

Share

ಜಗತ್ತಿನಲ್ಲಿ ಯಾವುದೇ ಜೀವಿಯಾಗಲಿ ಪರಸ್ಪರ ಗಂಡು ಹೆಣ್ಣಿನ ಮಿಲನವಿಲ್ಲದೆ ಮರಿಗಳಿಗೆ ಜನ್ಮ ನೀಡುವುದು ಅಸಾಧ್ಯದ ವಿಚಾರ. ಆದರೂ ಕೆಲವೊಂದು ಸರೀಸೃಪ ಜೀವಿಗಳು ಸ್ವತಃ ತಮ್ಮಷ್ಟಕ್ಕೆ ತಾವೇ ಗರ್ಭ ಧರಿಸಿದ ನಿದರ್ಶನಗಳಿವೆ. ಇತ್ತೀಚಿಗೆ ಈ ರೀತಿಯ ಮತ್ತೊಂದು ಆಶ್ವರ್ಯಕರ ಘಟನೆ ಕೋಸ್ಟರಿಕಾದಲ್ಲಿ ನಡೆದಿದೆ. ಹೆಣ್ಣು ಮೊಸಳೆಯೊಂದು ಗಂಡು ಮೊಸಳೆಯ ಮಿಲನವಿಲ್ಲದೆ ಮೊಟ್ಟೆ ಇಟ್ಟಿದೆ, ಇದು  ವೈಜ್ಞಾನಿಕ ಜಗತ್ತನ್ನೇ ಅಚ್ಚರಿಗೊಳಿಸಿದೆ. ಕೋಸ್ಟರಿಕಾದ ಮೃಗಾಲಯದಲ್ಲಿ ಈ ಅಪರೂಪದ ಘಟನೆ ನಡೆದಿದ್ದು, ಈ ಮೊಟ್ಟೆಯು ತಾಯಿ ಮೊಸಳೆಗೆ 99.9% ನಷ್ಟು ಹೋಲಿಕೆಯನ್ನು ಹೊಂದಿದೆ ಎಂದು ಪರೀಕ್ಷೆಯು ಬಹಿರಂಗಪಡಿಸಿದೆ. ಈ ವಿದ್ಯಮಾನವು ಪಕ್ಷಿಗಳು, ಮೀನುಗಳು ಮತ್ತು ಇತರ ಸರೀಸೃಪ ಜಾತಿಗಳಲ್ಲಿ ಕಂಡುಬಂದಿವೆ. ಆದರೆ ಮೊಸಳೆಗಳಲ್ಲಿ ಹಿಂದೆದೂ ಕಂಡುಬಂದಿರಲಿಲ್ಲ.

ಹೆಣ್ಣು ಮೊಸಳೆಯು ಯಾವಾಗಲೂ ಇತರ ಮೊಸಳೆಗಳಿಂದ ಬೇರ್ಪಟ್ಟು ವಾಸಿಸುತ್ತಿದ್ದರಿಂದ ಅದು ಹೇಗೆ ಮೊಟ್ಟೆ ಇಟ್ಟಿದೆ ಎಂದು ಮೃಗಾಲಯದವರು ಗೊಂದಲಕ್ಕೊಳಗಾದರು. ಇದರ ವಿಚಾರಣೆಗಾಗಿ ವಾರೆನ್ ಬೂತ್ ನೇತೃತ್ವದ ವಿಜ್ಞಾನಿಗಳ ತಂಡವನ್ನು ಕರೆತರಲಾಯಿತು. ವಿಜ್ಞಾನಿಗಳು ವಂಶವಾಹಿಗಳನ್ನು ಪರೀಕ್ಷಿಸಿದಾಗ ಮೊಟ್ಟೆಯನ್ನು ತನ್ನ ತಾಯಿಯೊಂದಿಗೆ ಶೇಕಡಾ 99.9% ರಷ್ಟು ಹೋಲುತ್ತದೆ ಹಾಗೂ ಅದಕ್ಕೆ ಯಾವುದೇ ತಂದೆ ಇಲ್ಲ ಎಂದು ದೃಢಪಡಿಸಿದರು. ಹಾಗೆ “ಮೊಸಳೆಗಳಲ್ಲಿ ಈ ಅಪರೂಪದ ಸಂತಾನೋತ್ಪತ್ತಿ ವಿಧಾನ ಇದೇ ಮೊದಲು’ ಎಂದು ತಿಳಿಸಿದರು.

ಕೆಲವೊಮ್ಮೆ ಕೆಲವು ಪ್ರಾಣಿಗಳು ಗಂಡಿನ ಸಹಾಯವಿಲ್ಲದೆ ಮರಿಗಳಿಗೆ ಜನ್ಮ ನೀಡುತ್ತವೆ. ಇದನ್ನು ‘ವರ್ಜಿನ್ ಬರ್ತ್’ ಅಥವಾ ‘ಫ್ಯಾಕಲ್ಟೇಟಿವ್ ಪಾರ್ಥೆನೋಜೆನೆಸಿನ್’ ಎಂದು ಕರೆಯುತ್ತಾರೆ. ಈ ವಿಧಾನದಲ್ಲಿ ಅಂಡಾಣು ಪುರುಷ ಜೀವಿಗಳ ವೀರ್ಯದಿಂದ ಫಲವತ್ತಾಗದೆ ಭ್ರೂಣವಾಗುತ್ತವೆ. ಈ ಹಿಂದೆ ಕೆಲವು ಜಾತಿಯ ಪಕ್ಷಿಗಳು, ಮೀನುಗಳು, ಹಲ್ಲಿಗಳು ಈ ರೀತಿಯ ಸರೀಸೃಪಗಳಲ್ಲಿ ಈ ರೀತಿಯ ಗರ್ಭಧಾರಣೆ ಕಾಣಿಸಿಕೊಂಡಿವೆ. ಆದರೆ ಮೊಸಳೆಗಳಲ್ಲಿ ಈ ಪ್ರಕ್ರಿಯೆಯಲ್ಲಿ ಪುರುಷ ಜೀವಿಯ ಸಹಕಾರವಿಲ್ಲದೆ ಅಂಡಾಣು ಹೆಣ್ಣು ಜೀವಿಯಲ್ಲಿ ತನ್ನಿಂದ ತಾನೇ ಭ್ರೂಣವಾಗಿ ಬೆಳೆಯುತ್ತದೆ.

ಕನ್ಯಾಜತ್ವ ಅಥವಾ ವರ್ಜಿನ್ ಬರ್ತ್ ಎಂಬುದು ಫ್ಯಾಕಲ್ಟೇಟಿವ್ ಪಾರ್ಥೆನೋಜೆನೆಸಿಸ್ ಎಂಬ ನೈಸರ್ಗಿಕ ಪ್ರಕ್ರಿಯೆ. ಜೇನು ನೊಣಗಳು, ಇರುವೆಗಳಂತಹ ಜೀವಿಗಳಲ್ಲಿ ಲೈಂಗಿಕ ವರ್ಣತಂತು ಇರುವುದಿಲ್ಲ. ಈ ಜೀವಿಗಳು ಪಾರ್ಥೆನೋಜೆನೆಸಿಸ್ ಮೂಲಕ ಸಂತಾನೋತ್ಪತ್ತಿ ಮಾಡುತ್ತವೆ. ಅದೇ ರೀತಿ ಕೆಲವು ಸರೀಸೃಪಗಳು, ಮೀನುಗಳು, ಪಕ್ಷಿಗಳು ಸಹ ಈ ರೀತಿಯಲ್ಲಿ ಸಂತಾನೋತ್ಪತ್ತಿ ಮಾಡುವ ಸಾಮರ್ಥ್ಯವನ್ನು ಹೊಂದಿವೆ. ಆದರೂ ಪ್ರಕ್ರಿಯೆಯ ಮೂಲಕ ಜನಿಸಿದ ಭ್ರೂಣವು ಬದುಕುಳಿಯುವ ಸಾಧ್ಯತೆ ಕಡಿಮೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

9 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

9 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

9 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

9 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

9 hours ago

ಭಾರತದ 44% ನಗರಗಳು ದೀರ್ಘಕಾಲದ ವಾಯು ಮಾಲಿನ್ಯ ಸಂಕಟದಲ್ಲಿ| CREA ಉಪಗ್ರಹ ಅಧ್ಯಯನದ ಶಾಕಿಂಗ್ ವರದಿ ಬಹಿರಂಗ

ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…

9 hours ago