Advertisement
ಸುದ್ದಿಗಳು

ವಿಸ್ಮಯ ಜಗತ್ತು | ಗಂಡು ಮೊಸಳೆಯ ಸಹಾಯವಿಲ್ಲದೆ ಮೊಟ್ಟೆ ಇಟ್ಟ ಹೆಣ್ಣು ಮೊಸಳೆ |

Share

ಜಗತ್ತಿನಲ್ಲಿ ಯಾವುದೇ ಜೀವಿಯಾಗಲಿ ಪರಸ್ಪರ ಗಂಡು ಹೆಣ್ಣಿನ ಮಿಲನವಿಲ್ಲದೆ ಮರಿಗಳಿಗೆ ಜನ್ಮ ನೀಡುವುದು ಅಸಾಧ್ಯದ ವಿಚಾರ. ಆದರೂ ಕೆಲವೊಂದು ಸರೀಸೃಪ ಜೀವಿಗಳು ಸ್ವತಃ ತಮ್ಮಷ್ಟಕ್ಕೆ ತಾವೇ ಗರ್ಭ ಧರಿಸಿದ ನಿದರ್ಶನಗಳಿವೆ. ಇತ್ತೀಚಿಗೆ ಈ ರೀತಿಯ ಮತ್ತೊಂದು ಆಶ್ವರ್ಯಕರ ಘಟನೆ ಕೋಸ್ಟರಿಕಾದಲ್ಲಿ ನಡೆದಿದೆ. ಹೆಣ್ಣು ಮೊಸಳೆಯೊಂದು ಗಂಡು ಮೊಸಳೆಯ ಮಿಲನವಿಲ್ಲದೆ ಮೊಟ್ಟೆ ಇಟ್ಟಿದೆ, ಇದು  ವೈಜ್ಞಾನಿಕ ಜಗತ್ತನ್ನೇ ಅಚ್ಚರಿಗೊಳಿಸಿದೆ. ಕೋಸ್ಟರಿಕಾದ ಮೃಗಾಲಯದಲ್ಲಿ ಈ ಅಪರೂಪದ ಘಟನೆ ನಡೆದಿದ್ದು, ಈ ಮೊಟ್ಟೆಯು ತಾಯಿ ಮೊಸಳೆಗೆ 99.9% ನಷ್ಟು ಹೋಲಿಕೆಯನ್ನು ಹೊಂದಿದೆ ಎಂದು ಪರೀಕ್ಷೆಯು ಬಹಿರಂಗಪಡಿಸಿದೆ. ಈ ವಿದ್ಯಮಾನವು ಪಕ್ಷಿಗಳು, ಮೀನುಗಳು ಮತ್ತು ಇತರ ಸರೀಸೃಪ ಜಾತಿಗಳಲ್ಲಿ ಕಂಡುಬಂದಿವೆ. ಆದರೆ ಮೊಸಳೆಗಳಲ್ಲಿ ಹಿಂದೆದೂ ಕಂಡುಬಂದಿರಲಿಲ್ಲ.

Advertisement
Advertisement
Advertisement
Advertisement

ಹೆಣ್ಣು ಮೊಸಳೆಯು ಯಾವಾಗಲೂ ಇತರ ಮೊಸಳೆಗಳಿಂದ ಬೇರ್ಪಟ್ಟು ವಾಸಿಸುತ್ತಿದ್ದರಿಂದ ಅದು ಹೇಗೆ ಮೊಟ್ಟೆ ಇಟ್ಟಿದೆ ಎಂದು ಮೃಗಾಲಯದವರು ಗೊಂದಲಕ್ಕೊಳಗಾದರು. ಇದರ ವಿಚಾರಣೆಗಾಗಿ ವಾರೆನ್ ಬೂತ್ ನೇತೃತ್ವದ ವಿಜ್ಞಾನಿಗಳ ತಂಡವನ್ನು ಕರೆತರಲಾಯಿತು. ವಿಜ್ಞಾನಿಗಳು ವಂಶವಾಹಿಗಳನ್ನು ಪರೀಕ್ಷಿಸಿದಾಗ ಮೊಟ್ಟೆಯನ್ನು ತನ್ನ ತಾಯಿಯೊಂದಿಗೆ ಶೇಕಡಾ 99.9% ರಷ್ಟು ಹೋಲುತ್ತದೆ ಹಾಗೂ ಅದಕ್ಕೆ ಯಾವುದೇ ತಂದೆ ಇಲ್ಲ ಎಂದು ದೃಢಪಡಿಸಿದರು. ಹಾಗೆ “ಮೊಸಳೆಗಳಲ್ಲಿ ಈ ಅಪರೂಪದ ಸಂತಾನೋತ್ಪತ್ತಿ ವಿಧಾನ ಇದೇ ಮೊದಲು’ ಎಂದು ತಿಳಿಸಿದರು.

Advertisement

ಕೆಲವೊಮ್ಮೆ ಕೆಲವು ಪ್ರಾಣಿಗಳು ಗಂಡಿನ ಸಹಾಯವಿಲ್ಲದೆ ಮರಿಗಳಿಗೆ ಜನ್ಮ ನೀಡುತ್ತವೆ. ಇದನ್ನು ‘ವರ್ಜಿನ್ ಬರ್ತ್’ ಅಥವಾ ‘ಫ್ಯಾಕಲ್ಟೇಟಿವ್ ಪಾರ್ಥೆನೋಜೆನೆಸಿನ್’ ಎಂದು ಕರೆಯುತ್ತಾರೆ. ಈ ವಿಧಾನದಲ್ಲಿ ಅಂಡಾಣು ಪುರುಷ ಜೀವಿಗಳ ವೀರ್ಯದಿಂದ ಫಲವತ್ತಾಗದೆ ಭ್ರೂಣವಾಗುತ್ತವೆ. ಈ ಹಿಂದೆ ಕೆಲವು ಜಾತಿಯ ಪಕ್ಷಿಗಳು, ಮೀನುಗಳು, ಹಲ್ಲಿಗಳು ಈ ರೀತಿಯ ಸರೀಸೃಪಗಳಲ್ಲಿ ಈ ರೀತಿಯ ಗರ್ಭಧಾರಣೆ ಕಾಣಿಸಿಕೊಂಡಿವೆ. ಆದರೆ ಮೊಸಳೆಗಳಲ್ಲಿ ಈ ಪ್ರಕ್ರಿಯೆಯಲ್ಲಿ ಪುರುಷ ಜೀವಿಯ ಸಹಕಾರವಿಲ್ಲದೆ ಅಂಡಾಣು ಹೆಣ್ಣು ಜೀವಿಯಲ್ಲಿ ತನ್ನಿಂದ ತಾನೇ ಭ್ರೂಣವಾಗಿ ಬೆಳೆಯುತ್ತದೆ.

ಕನ್ಯಾಜತ್ವ ಅಥವಾ ವರ್ಜಿನ್ ಬರ್ತ್ ಎಂಬುದು ಫ್ಯಾಕಲ್ಟೇಟಿವ್ ಪಾರ್ಥೆನೋಜೆನೆಸಿಸ್ ಎಂಬ ನೈಸರ್ಗಿಕ ಪ್ರಕ್ರಿಯೆ. ಜೇನು ನೊಣಗಳು, ಇರುವೆಗಳಂತಹ ಜೀವಿಗಳಲ್ಲಿ ಲೈಂಗಿಕ ವರ್ಣತಂತು ಇರುವುದಿಲ್ಲ. ಈ ಜೀವಿಗಳು ಪಾರ್ಥೆನೋಜೆನೆಸಿಸ್ ಮೂಲಕ ಸಂತಾನೋತ್ಪತ್ತಿ ಮಾಡುತ್ತವೆ. ಅದೇ ರೀತಿ ಕೆಲವು ಸರೀಸೃಪಗಳು, ಮೀನುಗಳು, ಪಕ್ಷಿಗಳು ಸಹ ಈ ರೀತಿಯಲ್ಲಿ ಸಂತಾನೋತ್ಪತ್ತಿ ಮಾಡುವ ಸಾಮರ್ಥ್ಯವನ್ನು ಹೊಂದಿವೆ. ಆದರೂ ಪ್ರಕ್ರಿಯೆಯ ಮೂಲಕ ಜನಿಸಿದ ಭ್ರೂಣವು ಬದುಕುಳಿಯುವ ಸಾಧ್ಯತೆ ಕಡಿಮೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

33 mins ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

1 hour ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

2 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

2 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

15 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

16 hours ago