ಸುದ್ದಿಗಳು

ವಿಸ್ಮಯ ಜಗತ್ತು | ಗಂಡು ಮೊಸಳೆಯ ಸಹಾಯವಿಲ್ಲದೆ ಮೊಟ್ಟೆ ಇಟ್ಟ ಹೆಣ್ಣು ಮೊಸಳೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಗತ್ತಿನಲ್ಲಿ ಯಾವುದೇ ಜೀವಿಯಾಗಲಿ ಪರಸ್ಪರ ಗಂಡು ಹೆಣ್ಣಿನ ಮಿಲನವಿಲ್ಲದೆ ಮರಿಗಳಿಗೆ ಜನ್ಮ ನೀಡುವುದು ಅಸಾಧ್ಯದ ವಿಚಾರ. ಆದರೂ ಕೆಲವೊಂದು ಸರೀಸೃಪ ಜೀವಿಗಳು ಸ್ವತಃ ತಮ್ಮಷ್ಟಕ್ಕೆ ತಾವೇ ಗರ್ಭ ಧರಿಸಿದ ನಿದರ್ಶನಗಳಿವೆ. ಇತ್ತೀಚಿಗೆ ಈ ರೀತಿಯ ಮತ್ತೊಂದು ಆಶ್ವರ್ಯಕರ ಘಟನೆ ಕೋಸ್ಟರಿಕಾದಲ್ಲಿ ನಡೆದಿದೆ. ಹೆಣ್ಣು ಮೊಸಳೆಯೊಂದು ಗಂಡು ಮೊಸಳೆಯ ಮಿಲನವಿಲ್ಲದೆ ಮೊಟ್ಟೆ ಇಟ್ಟಿದೆ, ಇದು  ವೈಜ್ಞಾನಿಕ ಜಗತ್ತನ್ನೇ ಅಚ್ಚರಿಗೊಳಿಸಿದೆ. ಕೋಸ್ಟರಿಕಾದ ಮೃಗಾಲಯದಲ್ಲಿ ಈ ಅಪರೂಪದ ಘಟನೆ ನಡೆದಿದ್ದು, ಈ ಮೊಟ್ಟೆಯು ತಾಯಿ ಮೊಸಳೆಗೆ 99.9% ನಷ್ಟು ಹೋಲಿಕೆಯನ್ನು ಹೊಂದಿದೆ ಎಂದು ಪರೀಕ್ಷೆಯು ಬಹಿರಂಗಪಡಿಸಿದೆ. ಈ ವಿದ್ಯಮಾನವು ಪಕ್ಷಿಗಳು, ಮೀನುಗಳು ಮತ್ತು ಇತರ ಸರೀಸೃಪ ಜಾತಿಗಳಲ್ಲಿ ಕಂಡುಬಂದಿವೆ. ಆದರೆ ಮೊಸಳೆಗಳಲ್ಲಿ ಹಿಂದೆದೂ ಕಂಡುಬಂದಿರಲಿಲ್ಲ.

Advertisement

ಹೆಣ್ಣು ಮೊಸಳೆಯು ಯಾವಾಗಲೂ ಇತರ ಮೊಸಳೆಗಳಿಂದ ಬೇರ್ಪಟ್ಟು ವಾಸಿಸುತ್ತಿದ್ದರಿಂದ ಅದು ಹೇಗೆ ಮೊಟ್ಟೆ ಇಟ್ಟಿದೆ ಎಂದು ಮೃಗಾಲಯದವರು ಗೊಂದಲಕ್ಕೊಳಗಾದರು. ಇದರ ವಿಚಾರಣೆಗಾಗಿ ವಾರೆನ್ ಬೂತ್ ನೇತೃತ್ವದ ವಿಜ್ಞಾನಿಗಳ ತಂಡವನ್ನು ಕರೆತರಲಾಯಿತು. ವಿಜ್ಞಾನಿಗಳು ವಂಶವಾಹಿಗಳನ್ನು ಪರೀಕ್ಷಿಸಿದಾಗ ಮೊಟ್ಟೆಯನ್ನು ತನ್ನ ತಾಯಿಯೊಂದಿಗೆ ಶೇಕಡಾ 99.9% ರಷ್ಟು ಹೋಲುತ್ತದೆ ಹಾಗೂ ಅದಕ್ಕೆ ಯಾವುದೇ ತಂದೆ ಇಲ್ಲ ಎಂದು ದೃಢಪಡಿಸಿದರು. ಹಾಗೆ “ಮೊಸಳೆಗಳಲ್ಲಿ ಈ ಅಪರೂಪದ ಸಂತಾನೋತ್ಪತ್ತಿ ವಿಧಾನ ಇದೇ ಮೊದಲು’ ಎಂದು ತಿಳಿಸಿದರು.

ಕೆಲವೊಮ್ಮೆ ಕೆಲವು ಪ್ರಾಣಿಗಳು ಗಂಡಿನ ಸಹಾಯವಿಲ್ಲದೆ ಮರಿಗಳಿಗೆ ಜನ್ಮ ನೀಡುತ್ತವೆ. ಇದನ್ನು ‘ವರ್ಜಿನ್ ಬರ್ತ್’ ಅಥವಾ ‘ಫ್ಯಾಕಲ್ಟೇಟಿವ್ ಪಾರ್ಥೆನೋಜೆನೆಸಿನ್’ ಎಂದು ಕರೆಯುತ್ತಾರೆ. ಈ ವಿಧಾನದಲ್ಲಿ ಅಂಡಾಣು ಪುರುಷ ಜೀವಿಗಳ ವೀರ್ಯದಿಂದ ಫಲವತ್ತಾಗದೆ ಭ್ರೂಣವಾಗುತ್ತವೆ. ಈ ಹಿಂದೆ ಕೆಲವು ಜಾತಿಯ ಪಕ್ಷಿಗಳು, ಮೀನುಗಳು, ಹಲ್ಲಿಗಳು ಈ ರೀತಿಯ ಸರೀಸೃಪಗಳಲ್ಲಿ ಈ ರೀತಿಯ ಗರ್ಭಧಾರಣೆ ಕಾಣಿಸಿಕೊಂಡಿವೆ. ಆದರೆ ಮೊಸಳೆಗಳಲ್ಲಿ ಈ ಪ್ರಕ್ರಿಯೆಯಲ್ಲಿ ಪುರುಷ ಜೀವಿಯ ಸಹಕಾರವಿಲ್ಲದೆ ಅಂಡಾಣು ಹೆಣ್ಣು ಜೀವಿಯಲ್ಲಿ ತನ್ನಿಂದ ತಾನೇ ಭ್ರೂಣವಾಗಿ ಬೆಳೆಯುತ್ತದೆ.

ಕನ್ಯಾಜತ್ವ ಅಥವಾ ವರ್ಜಿನ್ ಬರ್ತ್ ಎಂಬುದು ಫ್ಯಾಕಲ್ಟೇಟಿವ್ ಪಾರ್ಥೆನೋಜೆನೆಸಿಸ್ ಎಂಬ ನೈಸರ್ಗಿಕ ಪ್ರಕ್ರಿಯೆ. ಜೇನು ನೊಣಗಳು, ಇರುವೆಗಳಂತಹ ಜೀವಿಗಳಲ್ಲಿ ಲೈಂಗಿಕ ವರ್ಣತಂತು ಇರುವುದಿಲ್ಲ. ಈ ಜೀವಿಗಳು ಪಾರ್ಥೆನೋಜೆನೆಸಿಸ್ ಮೂಲಕ ಸಂತಾನೋತ್ಪತ್ತಿ ಮಾಡುತ್ತವೆ. ಅದೇ ರೀತಿ ಕೆಲವು ಸರೀಸೃಪಗಳು, ಮೀನುಗಳು, ಪಕ್ಷಿಗಳು ಸಹ ಈ ರೀತಿಯಲ್ಲಿ ಸಂತಾನೋತ್ಪತ್ತಿ ಮಾಡುವ ಸಾಮರ್ಥ್ಯವನ್ನು ಹೊಂದಿವೆ. ಆದರೂ ಪ್ರಕ್ರಿಯೆಯ ಮೂಲಕ ಜನಿಸಿದ ಭ್ರೂಣವು ಬದುಕುಳಿಯುವ ಸಾಧ್ಯತೆ ಕಡಿಮೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

2 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

2 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

2 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

2 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

2 hours ago