ಕಳೆದ ಮೂರು ತಿಂಗಳ ಹಿಂದೆ ನಾಸದಿಂದ ನಡೆದಿದ್ದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನದಲ್ಲಿ, ಗಗನಯಾತ್ರಿ ಶುಭಾಂಶು ಶುಕ್ಲಾ ನಡೆಸಿದ್ದ ಮೆಂತ್ಯ ಮತ್ತು ಹೆಸರು ಕಾಳುಗಳ ಮೊಳಕೆಯೊಡೆಯುವ ಪ್ರಯೋಗ ಯಶಸ್ವಿಯಾಗಿದ್ದು, ಅದರ ಮುಂದುವರಿದ ಸಂಶೋಧನೆ ಇದೀಗ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿದೆ. ಬಾಹ್ಯಾಕಾಶಕ್ಕೆ ರವಾನಿಸಿದ್ದ, ಮೆಂತ್ಯ ಮತ್ತು ಹೆಸರು ಕಾಳುಗಳು ಇದೀಗ ವಿಶ್ವವಿದ್ಯಾಲಯಕ್ಕೆ ಬಂದಿದ್ದು, ಕಾಳುಗಳು ಇದೀಗ ಮೊಳಕೆಯೊಡೆದಿದ್ದು, ಹೆಚ್ಚಿನ ಸಂಶೋಧನೆ ಆರಂಭಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರವಿಕುಮಾರ್ ಹೊಸಮನಿ ತಿಳಿಸಿದ್ದಾರೆ.
ಮೆಂತ್ಯೆ ಮತ್ತು ಹೆಸರು ಕಾಳುಗಳು, ಔಷಧೀಯ ಗುಣಗಳನ್ನು ಹೊಂದಿದ್ದು, ಹೃದಯ ಹಾಗೂ ಮೂತ್ರಪಿಂಡಗಳ ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗಲಿವೆ. ಭವಿಷ್ಯದಲ್ಲಿ ಗಗನಯಾನ ಕೈಗೊಳ್ಳುವವರ ಆರೋಗ್ಯ ಸುಧಾರಣೆಗೆ ನೆರವಾಗಲಿದೆ. ಈ ಕಾಳುಗಳಿಗೆ, ಶುಭಾಂಶು ಶುಕ್ಲಾ ಅವರು ಬ್ಯಾಹ್ಯಾಕಾಶದಲ್ಲಿ ನೀರು ಸಿಂಪಡಣೆ ಮಾಡಿದ್ದರು. ಇದೀಗ ಮೊಳಕೆಯೊಡೆದಿದ್ದು, ವಿಶ್ವವಿದ್ಯಾಲಯದ ಜೈವಿಕ ಸಂಶೋಧನಾ ಘಟಕದಲ್ಲಿ ಅದನ್ನು ಹೆಚ್ಚಿನ ಸಂಶೋಧನೆಗೆ ಒಳಪಡಿಸಲಾಗುತ್ತಿದೆ ಎಂದು ಸಹಾಯಕ ಪ್ರಾಧ್ಯಾಪಕ ರವಿಕುಮಾರ್ ಹೊಸಮನಿ ಹೇಳುತ್ತಾರೆ. ಈ ಸಂಶೋಧನೆ, ಮುಂದಿನ ದಿನಗಳಲ್ಲಿ ಕೃಷಿ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಸಹಕಾರಿಯಾಗಲಿದೆ ಎಂದು ಹೇಳುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…