Advertisement
MIRROR FOCUS

ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ

Share

ಕಳೆದ ಮೂರು ತಿಂಗಳ ಹಿಂದೆ ನಾಸದಿಂದ ನಡೆದಿದ್ದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನದಲ್ಲಿ,  ಗಗನಯಾತ್ರಿ ಶುಭಾಂಶು ಶುಕ್ಲಾ ನಡೆಸಿದ್ದ ಮೆಂತ್ಯ ಮತ್ತು ಹೆಸರು ಕಾಳುಗಳ ಮೊಳಕೆಯೊಡೆಯುವ ಪ್ರಯೋಗ ಯಶಸ್ವಿಯಾಗಿದ್ದು, ಅದರ ಮುಂದುವರಿದ ಸಂಶೋಧನೆ ಇದೀಗ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಗತಿಯಲ್ಲಿದೆ. ಬಾಹ್ಯಾಕಾಶಕ್ಕೆ ರವಾನಿಸಿದ್ದ, ಮೆಂತ್ಯ ಮತ್ತು ಹೆಸರು ಕಾಳುಗಳು ಇದೀಗ ವಿಶ್ವವಿದ್ಯಾಲಯಕ್ಕೆ ಬಂದಿದ್ದು, ಕಾಳುಗಳು ಇದೀಗ ಮೊಳಕೆಯೊಡೆದಿದ್ದು, ಹೆಚ್ಚಿನ ಸಂಶೋಧನೆ ಆರಂಭಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರವಿಕುಮಾರ್ ಹೊಸಮನಿ ತಿಳಿಸಿದ್ದಾರೆ.

ಮೆಂತ್ಯೆ ಮತ್ತು ಹೆಸರು ಕಾಳುಗಳು, ಔಷಧೀಯ ಗುಣಗಳನ್ನು ಹೊಂದಿದ್ದು, ಹೃದಯ ಹಾಗೂ ಮೂತ್ರಪಿಂಡಗಳ  ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗಲಿವೆ. ಭವಿಷ್ಯದಲ್ಲಿ ಗಗನಯಾನ ಕೈಗೊಳ್ಳುವವರ ಆರೋಗ್ಯ ಸುಧಾರಣೆಗೆ ನೆರವಾಗಲಿದೆ. ಈ ಕಾಳುಗಳಿಗೆ,  ಶುಭಾಂಶು ಶುಕ್ಲಾ ಅವರು ಬ್ಯಾಹ್ಯಾಕಾಶದಲ್ಲಿ ನೀರು ಸಿಂಪಡಣೆ ಮಾಡಿದ್ದರು. ಇದೀಗ ಮೊಳಕೆಯೊಡೆದಿದ್ದು, ವಿಶ್ವವಿದ್ಯಾಲಯದ ಜೈವಿಕ ಸಂಶೋಧನಾ ಘಟಕದಲ್ಲಿ ಅದನ್ನು ಹೆಚ್ಚಿನ ಸಂಶೋಧನೆಗೆ ಒಳಪಡಿಸಲಾಗುತ್ತಿದೆ ಎಂದು ಸಹಾಯಕ ಪ್ರಾಧ್ಯಾಪಕ ರವಿಕುಮಾರ್ ಹೊಸಮನಿ ಹೇಳುತ್ತಾರೆ. ಈ ಸಂಶೋಧನೆ, ಮುಂದಿನ ದಿನಗಳಲ್ಲಿ ಕೃಷಿ ಮತ್ತು ಸಂಶೋಧನಾ ಕ್ಷೇತ್ರಕ್ಕೆ ಸಹಕಾರಿಯಾಗಲಿದೆ ಎಂದು ಹೇಳುತ್ತಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

4 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

22 hours ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago