Advertisement
MIRROR FOCUS

ರಸಗೊಬ್ಬರ ಅಕ್ರಮ ಮಾರಾಟ | ದಾವಣಗೆರೆ ಜಿಲ್ಲೆಯ ಎಂಟು ರಸಗೊಬ್ಬರ ಮಾರಾಟಗಾರರ ಪರವಾನಗಿ ರದ್ದು

Share

ದಾವಣಗೆರೆ ಜಿಲ್ಲೆಯಲ್ಲಿ ಸಗಟು ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು  ಚಿಲ್ಲರೆ ಮಾರಾಟಗಾರರಿಗೆ ಪೂರೈಕೆ ಮಾಡದೆ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ  8  ಪರವಾನಿಗೆಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಂ.ಗಂಗಾಧರ್ ಸ್ವಾಮಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಾಗಿದೆ ಎಂಬ ವರದಿ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳ ತಪಾಸಣೆಯನ್ನು ಕಂದಾಯ ಅಧಿಕಾರಿಗಳು ಮತ್ತು ಕೃಷಿ ಅಧಿಕಾರಿ, ಪೊಲೀಸ್ ಅಧಿಕಾರಿಗಳೊಂದಿಗೆ ಜಂಟಿ ತಪಾಸಣೆ ನಡೆಸಿ, ನಿಯಮಗಳನ್ನು ಉಲ್ಲಂಘನೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಯೂರಿಯಾ ಹೊರತುಪಡಿಸಿ, ಇತರೆ ರಸಗೊಬ್ಬರಗಳ ವ್ಯತ್ಯಯ ಉಂಟಾಗಿಲ್ಲ. ಹರಳು ಯೂರಿಯಾಗೆ ಹೆಚ್ಚಿನ ಬೇಡಿಕೆ ಬಂದಿದ್ದರಿಂದ ರೈತರಲ್ಲಿ ಆತಂಕವಾಗಿತ್ತೆ ವಿನಃ ಬೇಡಿಕೆಯಷ್ಟು ಪೂರೈಕೆ ಮತ್ತು ಹಂಚಿಕೆಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಇಲ್ಲ. ರೈತರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟಪಡಿಸಿದ್ದಾರೆ.  ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ಸಾವಿರ ಮೆಟ್ರಿಕ್ ಟನ್ ಯೂರಿಯಾ ದಾಸ್ತಾನಿದ್ದು, ಇನ್ನು ಕೆಲವೇ ದಿನದಲ್ಲಿ1800 ಮೆಟ್ರಿಕ್ ಟನ್ ಯೂರಿಯಾ ಸರಬರಾಜಾಗಲಿದೆ. ಜಿಲ್ಲೆಯಲ್ಲಿ ಕೃಷಿ ಸಂಬಂಧಿಸಿದ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ರಸಗೊಬ್ಬರ ಮಾರಾಟಗಾರರು ತಮ್ಮಲ್ಲಿರುವ ಭೌತಿಕ ಹಾಗೂ ಆನ್‌ಲೈನ್ ದಾಸ್ತಾನು ಒಂದೆ ರೀತಿ ಇರುವಂತೆ ನೋಡಿಕೊಳ್ಳಬೇಕು. ಮಾರಾಟವಾದ ತಕ್ಷಣ ನಮೂದಿಸಿದರೆ ಸರಿಯಾದ ಲೆಕ್ಕ ಸಿಗುತ್ತದೆ. ರಸಗೊಬ್ಬರದ ಕೃತಕ ಕೊರತೆ ಉಂಟಾಗುವ ರೀತಿ ಸನ್ನಿವೇಶ ಸೃಷ್ಟಿಸುವುದು, ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ,…

6 hours ago

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

17 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

18 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

1 day ago