Advertisement
MIRROR FOCUS

ರಸಗೊಬ್ಬರ ಅಕ್ರಮ ಮಾರಾಟ | ದಾವಣಗೆರೆ ಜಿಲ್ಲೆಯ ಎಂಟು ರಸಗೊಬ್ಬರ ಮಾರಾಟಗಾರರ ಪರವಾನಗಿ ರದ್ದು

Share

ದಾವಣಗೆರೆ ಜಿಲ್ಲೆಯಲ್ಲಿ ಸಗಟು ಮಾರಾಟಗಾರರಿಗೆ ಹಂಚಿಕೆಯಾದ ರಸಗೊಬ್ಬರವನ್ನು  ಚಿಲ್ಲರೆ ಮಾರಾಟಗಾರರಿಗೆ ಪೂರೈಕೆ ಮಾಡದೆ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡಿದ  8  ಪರವಾನಿಗೆಗಳನ್ನು ರದ್ದುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಎಂ.ಗಂಗಾಧರ್ ಸ್ವಾಮಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆಯಾಗಿದೆ ಎಂಬ ವರದಿ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳ ತಪಾಸಣೆಯನ್ನು ಕಂದಾಯ ಅಧಿಕಾರಿಗಳು ಮತ್ತು ಕೃಷಿ ಅಧಿಕಾರಿ, ಪೊಲೀಸ್ ಅಧಿಕಾರಿಗಳೊಂದಿಗೆ ಜಂಟಿ ತಪಾಸಣೆ ನಡೆಸಿ, ನಿಯಮಗಳನ್ನು ಉಲ್ಲಂಘನೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಯೂರಿಯಾ ಹೊರತುಪಡಿಸಿ, ಇತರೆ ರಸಗೊಬ್ಬರಗಳ ವ್ಯತ್ಯಯ ಉಂಟಾಗಿಲ್ಲ. ಹರಳು ಯೂರಿಯಾಗೆ ಹೆಚ್ಚಿನ ಬೇಡಿಕೆ ಬಂದಿದ್ದರಿಂದ ರೈತರಲ್ಲಿ ಆತಂಕವಾಗಿತ್ತೆ ವಿನಃ ಬೇಡಿಕೆಯಷ್ಟು ಪೂರೈಕೆ ಮತ್ತು ಹಂಚಿಕೆಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೊರತೆ ಇಲ್ಲ. ರೈತರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸ್ಪಷ್ಟಪಡಿಸಿದ್ದಾರೆ.  ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ಸಾವಿರ ಮೆಟ್ರಿಕ್ ಟನ್ ಯೂರಿಯಾ ದಾಸ್ತಾನಿದ್ದು, ಇನ್ನು ಕೆಲವೇ ದಿನದಲ್ಲಿ1800 ಮೆಟ್ರಿಕ್ ಟನ್ ಯೂರಿಯಾ ಸರಬರಾಜಾಗಲಿದೆ. ಜಿಲ್ಲೆಯಲ್ಲಿ ಕೃಷಿ ಸಂಬಂಧಿಸಿದ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾದಂತೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ರಸಗೊಬ್ಬರ ಮಾರಾಟಗಾರರು ತಮ್ಮಲ್ಲಿರುವ ಭೌತಿಕ ಹಾಗೂ ಆನ್‌ಲೈನ್ ದಾಸ್ತಾನು ಒಂದೆ ರೀತಿ ಇರುವಂತೆ ನೋಡಿಕೊಳ್ಳಬೇಕು. ಮಾರಾಟವಾದ ತಕ್ಷಣ ನಮೂದಿಸಿದರೆ ಸರಿಯಾದ ಲೆಕ್ಕ ಸಿಗುತ್ತದೆ. ರಸಗೊಬ್ಬರದ ಕೃತಕ ಕೊರತೆ ಉಂಟಾಗುವ ರೀತಿ ಸನ್ನಿವೇಶ ಸೃಷ್ಟಿಸುವುದು, ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

9 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

10 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

10 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

11 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

11 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

12 hours ago