Advertisement
ಸುದ್ದಿಗಳು

ಸೆ.22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯ’ | ರಾಘವೇಶ್ವರ ಶ್ರೀಗಳ ಅದ್ದೂರಿ ಪುರಪ್ರವೇಶ

Share

ಸೆಪ್ಟೆಂಬರ್ 22 ರಿಂದ ಸಾಗರದ ಅಗ್ರಹಾರದಲ್ಲಿ ಶ್ರೀ ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ  ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಆರಂಭಗೊಳ್ಳಲಿರುವ “ನವರಾತ್ರ ನಮಸ್ಯಾ” ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಾಳೆ ಗೋಕರ್ಣದಿಂದ ಶ್ರೀಗಳು ಸಾಗರಕ್ಕೆ ಪುರಪ್ರವೇಶ ಮಾಡಲಿದ್ದು, ಸಾಗರ ನಗರದಲ್ಲಿ ಸಮಷ್ಟಿ ಸಮಾಜದಿಂದ ಅದ್ದೂರಿ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಸೆ. 22 ರಿಂದ ನವರಾತ್ರಿ ನಮಸ್ಯಾ ಧಾರ್ಮಿಕ ಕಾರ್ಯಕ್ರಮ ಪ್ರಾರಂಭ ಗೊಳ್ಳಲಿದೆ. ಪ್ರತಿದಿನ ಮಧ್ಯಾಹ್ನ 3.30 ರಿಂದ 5 ಗಂಟೆಯವರೆಗೆ ಲಲಿತೋಪಾಖ್ಯಾನ ಪ್ರವಚನ ಇರುತ್ತದೆ. ನಂತರ ದೀಪಾಲಂಕಾರ, ದುರ್ಗಾದೀಪ ಪೂಜೆ, ಕುಂಕುಮಾರ್ಚನೆ ಏರ್ಪಡಿಸಲಾಗಿದೆ. ಪ್ರತಿದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ನಡೆಯಲಿದೆ. ಏಕಾದಶಿ ದಿನ ವಿಶೇಷ ಶ್ರೀಚಕ್ರ ಆರಾಧನೆ ಇರುತ್ತದೆ.

Advertisement

ಹೊಸನಗರ , ಸಾಗರ, ಸಿದ್ದಾಪುರ ಒಳಗೊಂಡ ಸಾಗರ ಪ್ರಾಂತ್ಯದ ಶಿಷ್ಯಭಕ್ತರ ಸಮಿತಿ ಇದೇ ಪ್ರಥಮ ಬಾರಿ ಸಾಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ವಿಜೃಂಭಣೆಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ನವರಾತ್ರ ನಮಸ್ಯಾಕ್ಕೆ ಸಮಸ್ತರನ್ನು ಆಹ್ವಾನಿಸುವ ಅಕ್ಷತಾಭಿಯಾನ ಒಂದೂವರೆ ತಿಂಗಳ ಹಿಂದೆಯೇ ಆರಂಭಗೊಂಡಿದ್ದು ಮನೆಮನೆಗೆ ಆಹ್ವಾನ ನೀಡುವ ಕಾರ್ಯವನ್ನು ಶ್ರೀಮಠದ ಮಾತೃ ವಿಭಾಗದ ಮಾತೆಯರು ನಡೆಸಿದ್ದಲ್ಲದೆ ಉಡಿ ಸೇವೆಯೂ ಸೇರಿದಂತೆ ಜಗನ್ಮಾತೆಯ ಆರಾಧನೆಗೆ ಪೂರಕವಾಗಿರುವ ಸಕಲ ಸಿದ್ದತೆಗೆ ತಂಡೋಪತಂಡವಾಗಿ ಆಗಮಿಸಿ ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯದಲ್ಲಿ ಇಡಿ ಮಹಾಮಂಡಲ ವ್ಯಾಪ್ತಿಯ ಸಾವಿರಾರು ಮಾತಾ ಕಾರ್ಯಕರ್ತರು ತೊಡಗಿಸಿಕೊಂಡಿದ್ದಾರೆ.

ಇನ್ನು ಧಾರ್ಮಿಕದಿಂದ ಹಿಡಿದು ಸಾಂಸ್ಕøತಿಕದವರೆಗೆ, ಶಬರಿ ಆತಿಥ್ಯದಿಂದ ಹಿಡಿದು ಸೇವಾ ಕೇಂದ್ರದವರೆಗೆ ಗಣ್ಯರಾಗಮನದ ಸ್ವಾಗತದಿಂದ ಹಿಡಿದು ಪ್ರಸಾದ ವಿತರಣೆಯವರೆಗೆ ಸಮಿತಿಯಿಂದ ರೂಪುಗೊಂಡಿರುವ 14 ವಿಭಾಗದ ಸಂಚಾಲಕರು ಅವರೊಂದಿಗೆ ಪ್ರತಿ ಸಂಚಾಲಕರ ತಂಡದಲ್ಲಿ ತಲಾ 10 ಸಹ ಸಂಚಾಲಕರು ಹೀಗೆ 500 ಹೆಚ್ಚು ಕಾರ್ಯಕರ್ತರು ಈ ನವರಾತ್ರ ಸಮಸ್ಯಾ ಕಾರ್ಯಕ್ರಮದಲ್ಲಿ ಸೇವೆ ಮಾಡಲಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement

ಈಗಾಗಲೆ ಧಾರ್ಮಿಕ ಕಾರ್ಯಕ್ರಮಕ್ಕೆ ಅಗತ್ಯವಿರುವ ಹಾಗೂ ಪ್ರಸಾದ ಭೋಜನದ ವ್ಯವಸ್ಥೆಗೂ ಸೇರಿ ಅಪಾರ ಸಂಖ್ಯೆಯ ಶಿಷ್ಯ ಭಕ್ತರು ಹೊರೆಗಾಣಿಕೆ ರೂಪದಲ್ಲಿ ಸುವಸ್ತುಗಳನ್ನು ಸಮರ್ಪಿಸುತ್ತಿರುವುದು ವಿಶೇಷವಾಗಿ ಕಂಡು ಬರುತ್ತಿದೆ. 15 ದಿನಗಳ ಸೇವೆಗಾಗಿ ವಿವಿಧ ಭಾಗದಿಂದ ಕಾರ್ಯಕರ್ತರು ಹೆಸರು ನೊಂದಾಯಿಸಿಕೊಳ್ಳುತ್ತಿದ್ದಾರೆ.

ನವರಾತ್ರ ನಮಸ್ಯಾ ಪೂರ್ಣ ಸಿದ್ದತೆಯನ್ನು ಶುಕ್ರವಾರ ಸಮಿತಿಯ ಅಧ್ಯಕ್ಷ ಗುರುಮೂರ್ತಿ ಹೆಗಡೆ ಕಲ್ಸೆಮನೆ ಶಿಕಾರಿಪುರ ಅವರು ಸಂಚಾಲನ ತಂಡದ ಪ್ರಮುಖರೊಂದಿಗೆ ವೀಕ್ಷಿಸಿದರು. ಹಾಗೂ ಈ ವೇಳೆ ಮಾತನಾಡಿದ ಅವರು ಲೋಕಕಲ್ಯಾಣಾರ್ಥವಾಗಿ ಸಂಕಲ್ಪಗೊಂಡು ಸಾಗರದಲ್ಲಿ ನಡೆಯುತ್ತಿರುವ ನವರಾತ್ರ ನಮಸ್ಯಾದಲ್ಲಿ ಸಮಸ್ತರು ಪಾಲ್ಗೊಳ್ಳಬೇಕು ಎಂದು ಪ್ರೀತಿಯ ಕರೆ ನೀಡಿದ್ದಾರೆ. ಈ ವೇಳೆ ಕ್ರಿಯಾ ಸಮಿತಿಯ ಸಂಚಾಲಕ ಮುರಳಿ ಗೀಜಗಾರು, ಸಂಯೋಜಕ ಶಿವರಾಮಯ್ಯ, ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಹೆಗಡೆ ಕೆರೆಕೈ , ಗುರುಪಾದ ಭೀಮನಕೋಣೆ ಸೇರಿದಂತೆ ವಿವಿಧ ವಿಭಾಗದ ಸಂಚಾಲಕರು ಇದ್ದರು.

Advertisement

ಇಂದು ಪುರ ಪ್ರವೇಶ : ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯಸಾನ್ನಿಧ್ಯವಹಿಸಲಿರುವ ಶ್ರೀರಾಘವೇಶ್ವರ ಭಾರತೀ ಶ್ರೀಗಳವರ ಪುರಪ್ರವೇಶ ಕಾರ್ಯಕ್ರಮ ಶನಿವಾರ ಸಂಜೆ 5.30 ಗಂಟೆಗೆ ಇಲ್ಲಿನ ಶಾರದಾಂಬ ವೃತ್ತದಿಂದ ಆಯೋಜಿಸಲಾಗಿದೆ. ಅಲ್ಲಿಂದ ಚಾಮರಾಜಪೇಟೆ ಮಾರ್ಗವಾಗಿ ಗಣಪತಿ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ನಡೆಯಲಿದೆ. 500 ಕ್ಕೂ ಹೆಚ್ಚು ಮಾತೆಯರಿಂದ ಪೂರ್ಣ ಕುಂಭ ಸ್ವಾಗತ, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳಿಂದ ನಾದಸ್ವರ ವಾದನ, ಪ್ರಸಿದ್ದ ಮೂರು ಚಂಡೆ ತಂಡಗಳಿಂದ ಚೆಂಡೆ ವಾದನ, ಶ್ರೀರಾಮನ ಆಕೃತಿಯ ವಿಶೇಷ ಮೂರ್ತಿಯ ಆಕರ್ಷಣೆ, ಹಾಗೂ ಸಾಗರ ನಗರದ ವಿವಿಧ ಸಮಾಜದ 20 ಕ್ಕೂ ಹೆಚ್ಚು ತಂಡಗಳಿಂದ ಭಜನೆ, ಮತ್ತು ವಿಶೇಷವಾಗಿ ಕುಂದಾಪುರ ಶಿರೂರಿನ ಪರಿಣಿತ ಕಲಾವಿದರಿಂದ ನೃತ್ಯ ಭಜನಾ ತಂಡ ಈ ಪುರಪ್ರವೇಶ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಪುರ ಪ್ರವೇಶ ಮತ್ತು ನಗರಾಲಂಕಾರ ಸಂಚಾಲಕ ಕೆ.ಆರ್. ಗಣೇಶ್‍ಪ್ರಸಾದ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

24 minutes ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

2 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

3 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

8 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

3 days ago