ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು, ಕೌಶಲ್ಯವನ್ನು ಕಲ್ಪಿಸುವ ಸಲುವಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜೀವನೋಪಾಯ ಮತ್ತು ಭಾರತೀಯ ಕಾಫಿ ಮಂಡಳಿಯ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತೀಯ ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಜಿ.ಕೆ ಜಗದೀಶ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕರ್ನಾಟಕ ನಿರ್ದೇಶಕರಾದ, ಶ್ರೀವಿದ್ಯಾ ಒಪ್ಪಂದಕ್ಕೆ ಸಹಿ ಹಾಕಿದರು. ಡಾ. ಜಿ.ಕೆ ಜಗದೀಶ್, ಮಾತನಾಡಿ ಈ ಮಹತ್ವದ ಯೋಜನೆ ರಾಜ್ಯಾದ್ಯಂತ ಕಾಫಿ ನವೋದ್ಯಮವನ್ನು ಉತ್ತೇಜಿಸಲು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…