Advertisement
ಸುದ್ದಿಗಳು

ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |

Share

ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli)  ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು ಕಾಂಗ್ರೆಸ್‌ನ(Congress) ಭದ್ರ ಕೋಟೆ. ಆದರೆ ಕಳೆದ ಬಾರಿ ಬಿಜೆಪಿ(BJP) ಅಭ್ಯರ್ಥಿ ಸ್ಮೃತಿ ಇರಾನಿ(Smrithi Irani) ವಿರುದ್ಧ ರಾಹುಲ್‌ ಗಾಂಧಿ ಹಿನಾಯ ಸೋಲುಂಡಿದ್ದರು. ಕಾಂಗ್ರೆಸ್‌ ನ ಹಿರಿಯರೆಲ್ಲಾ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ಬೀಗಿದ್ದರು. ಆದರೆ ಈ ಬಾರಿಯೂ ರಾಹುಲ್‌ ಗಾಂಧಿಗೆ(Rahul Gandhi) ಅಮೇಥಿ ಸುಲಭದ ಹಾದಿಯಲ್ಲ. ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ  ಮತ್ತು ರಾಯ್ ಬರೇಲಿಯಿಂದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ(Priyanka Gandhi) ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ. ಈ ವಾರಂತ್ಯದಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಸೋನಿಯಾ ಗಾಂಧಿ (Sonia Gandhi) ರಾಜ್ಯಸಭೆಗೆ ಆಯ್ಕೆಯಾಗಿದ್ದು, ಇತ್ತ ರಾಯ್ ಬರೇಲಿ ಮತ್ತು ವಯನಾಡ್ ನಿಂದ ರಾಹುಲ್ ಗಾಂಧಿ  ಸ್ಪರ್ಧಿಸಿರುವ ಹಿನ್ನೆಲೆ ಅಮೇಥಿಯಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಚರ್ಚೆ ಹುಟ್ಟು ಹಾಕಿದೆ. ಅಲ್ಲದೇ ಕಾಂಗ್ರೆಸ್ ಕೂಡಾ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೆ ಕುತೂಹಲ ಹೆಚ್ಚಿಸಿತ್ತು.

ಈ ನಡುವೆ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ  ಹಾಗೂ ಅಮೇಥಿಯಿಂದ ರಾಬರ್ಟ್ ವಾದ್ರಾ ಸ್ಪರ್ಧಿಸುವ ಚರ್ಚೆಗಳು ಕೇಳಿ ಬಂದಿತ್ತು. ಅವರ ಬ್ಯಾನರ್ ಪೋಸ್ಟರ್ ಗಳನ್ನು ಕಾರ್ಯಕರ್ತರು ಕ್ಷೇತ್ರದಲ್ಲಿ ಹಾಕಿದ್ದರು‌. ಅಮೇಥಿಯಿಂದ ನನ್ನ ಸ್ಪರ್ಧೆಯನ್ನು ಜನರು ಬಯಸಿದ್ದಾರೆ ಎಂದು ಖುದ್ದು ರಾಬರ್ಟ್ ವಾದ್ರಾ ಹೇಳಿಕೆ ನೀಡಿದ್ದರು. 1960 ರಿಂದ ರಾಯ್ ಬರೇಲಿ ಕ್ಷೇತ್ರ (Raebareli Constituency) ಕಾಂಗ್ರೆಸ್ ಭದ್ರಕೋಟೆಯಾಗಿದೆ. ಫಿರೋಜ್ ಗಾಂಧಿ, ಇಂದಿರಾ ಗಾಂಧಿ ಕೂಡಾ ಇಲ್ಲಿಂದ ಸ್ಪರ್ಧಿಸಿದ್ದರು. 2006 ರಿಂದ ಸೋನಿಯಾ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು‌. ಸೋನಿಯಾ ಗಾಂಧಿ ರಾಜ್ಯಸಭೆ ಆಯ್ಕೆ ಬಳಿಕ ಪ್ರಿಯಾಂಕಾ ಗಾಂಧಿ ಪ್ರಬಲ ಸ್ಪರ್ಧಿಯಾಗಿದ್ದಾರೆ. ಆದರೆ ಅಮೇಥಿಯಲ್ಲಿ ಕಳೆದ ಬಾರಿ ರಾಹುಲ್ ಗಾಂಧಿ ಸೋಲನ್ನಪ್ಪಿದ್ದು ಈ ಬಾರಿಯೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಬಲ ಸ್ಪರ್ಧೆ ನೀಡುತ್ತಿರುವ ಹಿನ್ನೆಲೆ ರಾಹುಲ್ ಗಾಂಧಿಗೆ ಕಷ್ಟಕರವಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

8 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

9 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

15 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

16 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

18 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

18 hours ago