Advertisement
ಸುದ್ದಿಗಳು

ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |

Share

ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli)  ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು ಕಾಂಗ್ರೆಸ್‌ನ(Congress) ಭದ್ರ ಕೋಟೆ. ಆದರೆ ಕಳೆದ ಬಾರಿ ಬಿಜೆಪಿ(BJP) ಅಭ್ಯರ್ಥಿ ಸ್ಮೃತಿ ಇರಾನಿ(Smrithi Irani) ವಿರುದ್ಧ ರಾಹುಲ್‌ ಗಾಂಧಿ ಹಿನಾಯ ಸೋಲುಂಡಿದ್ದರು. ಕಾಂಗ್ರೆಸ್‌ ನ ಹಿರಿಯರೆಲ್ಲಾ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ಬೀಗಿದ್ದರು. ಆದರೆ ಈ ಬಾರಿಯೂ ರಾಹುಲ್‌ ಗಾಂಧಿಗೆ(Rahul Gandhi) ಅಮೇಥಿ ಸುಲಭದ ಹಾದಿಯಲ್ಲ. ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ  ಮತ್ತು ರಾಯ್ ಬರೇಲಿಯಿಂದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ(Priyanka Gandhi) ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ. ಈ ವಾರಂತ್ಯದಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಸೋನಿಯಾ ಗಾಂಧಿ (Sonia Gandhi) ರಾಜ್ಯಸಭೆಗೆ ಆಯ್ಕೆಯಾಗಿದ್ದು, ಇತ್ತ ರಾಯ್ ಬರೇಲಿ ಮತ್ತು ವಯನಾಡ್ ನಿಂದ ರಾಹುಲ್ ಗಾಂಧಿ  ಸ್ಪರ್ಧಿಸಿರುವ ಹಿನ್ನೆಲೆ ಅಮೇಥಿಯಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಚರ್ಚೆ ಹುಟ್ಟು ಹಾಕಿದೆ. ಅಲ್ಲದೇ ಕಾಂಗ್ರೆಸ್ ಕೂಡಾ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೆ ಕುತೂಹಲ ಹೆಚ್ಚಿಸಿತ್ತು.

ಈ ನಡುವೆ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ  ಹಾಗೂ ಅಮೇಥಿಯಿಂದ ರಾಬರ್ಟ್ ವಾದ್ರಾ ಸ್ಪರ್ಧಿಸುವ ಚರ್ಚೆಗಳು ಕೇಳಿ ಬಂದಿತ್ತು. ಅವರ ಬ್ಯಾನರ್ ಪೋಸ್ಟರ್ ಗಳನ್ನು ಕಾರ್ಯಕರ್ತರು ಕ್ಷೇತ್ರದಲ್ಲಿ ಹಾಕಿದ್ದರು‌. ಅಮೇಥಿಯಿಂದ ನನ್ನ ಸ್ಪರ್ಧೆಯನ್ನು ಜನರು ಬಯಸಿದ್ದಾರೆ ಎಂದು ಖುದ್ದು ರಾಬರ್ಟ್ ವಾದ್ರಾ ಹೇಳಿಕೆ ನೀಡಿದ್ದರು. 1960 ರಿಂದ ರಾಯ್ ಬರೇಲಿ ಕ್ಷೇತ್ರ (Raebareli Constituency) ಕಾಂಗ್ರೆಸ್ ಭದ್ರಕೋಟೆಯಾಗಿದೆ. ಫಿರೋಜ್ ಗಾಂಧಿ, ಇಂದಿರಾ ಗಾಂಧಿ ಕೂಡಾ ಇಲ್ಲಿಂದ ಸ್ಪರ್ಧಿಸಿದ್ದರು. 2006 ರಿಂದ ಸೋನಿಯಾ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು‌. ಸೋನಿಯಾ ಗಾಂಧಿ ರಾಜ್ಯಸಭೆ ಆಯ್ಕೆ ಬಳಿಕ ಪ್ರಿಯಾಂಕಾ ಗಾಂಧಿ ಪ್ರಬಲ ಸ್ಪರ್ಧಿಯಾಗಿದ್ದಾರೆ. ಆದರೆ ಅಮೇಥಿಯಲ್ಲಿ ಕಳೆದ ಬಾರಿ ರಾಹುಲ್ ಗಾಂಧಿ ಸೋಲನ್ನಪ್ಪಿದ್ದು ಈ ಬಾರಿಯೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಬಲ ಸ್ಪರ್ಧೆ ನೀಡುತ್ತಿರುವ ಹಿನ್ನೆಲೆ ರಾಹುಲ್ ಗಾಂಧಿಗೆ ಕಷ್ಟಕರವಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago