ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ಕೃಷಿಭೂಮಿಯಲ್ಲಿ ಆಕಸ್ಮಿಕ ಉತ್ಖನನದ ಸಂದರ್ಭ ಸುಮಾರು 4,000 ವರ್ಷಗಳ ಹಿಂದಿನ ದೊಡ್ಡ ಸಂಖ್ಯೆಯ ತಾಮ್ರದ ಕತ್ತಿಗಳು ಪತ್ತೆಯಾಗಿದೆ.
ಮೈನ್ ಪುರಿ ಜಿಲ್ಲೆಯ ರೈತ ತನ್ನ ಹೊಲವನ್ನು ಸಮತಟ್ಟು ಮಾಡುತ್ತಿದ್ದನು. ಈ ಸಂದರ್ಭ ತಾಮ್ರದ ಕತ್ತಿಗಳು ಪತ್ತೆಯಾಗಿತ್ತು. ಆರಂಭದಲ್ಲಿ, ರೈತರು ಈ ಕಲಾಕೃತಿಗಳನ್ನು ಚಿನ್ನ ಮತ್ತು ಬೆಳ್ಳಿಯೆಂದು ಭಾವಿಸಿ ಮನೆಗೆ ಕೊಂಡು ಹೋಗಿದ್ದರು. ಆದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ ಬಳಿಕ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಗೆ ಮಾಹಿತಿ ನೀಡಲಾಯಿತು.
ತಜ್ಞರ ಪ್ರಕಾರ, ಆಯುಧಗಳನ್ನು ತಾಮ್ರದ ಯುಗಕ್ಕೆ ಅಂದರೆ ಸರಿಸುಮಾರು 4,000 ವರ್ಷಗಳ ಹಿಂದೆ ಗುರುತಿಸಬಹುದು. “ಈ ತಾಮ್ರದ ಶೇಖರಣೆಗಳು ಚಾಲ್ಕೋಲಿಥಿಕ್ ಅವಧಿಗೆ ಸೇರಿವೆ ಮತ್ತು ಓಕ್ರೆ-ಬಣ್ಣದ ಕುಂಬಾರಿಕೆ (OCP) ಉಪಸ್ಥಿತಿಯು ಈ ಸಮಯದೊಂದಿಗೆ ನೇರವಾಗಿ ಸಂಬಂಧಿಸಿದೆ” ಎಂದು ಪುರಾತತ್ವ ನಿರ್ದೇಶಕ ಭುವನ್ ವಿಕ್ರಮ್ ಮಾಧ್ಯಮಗಳಿಗೆ ಹೇಳಿದರು.
ಪುರಾತತ್ವ ಇಲಾಖೆಯ ಶಾಸ್ತ್ರಜ್ಞ ರಾಜ್ ಕುಮಾರ್, “ಆಯುಧಗಳ ದಾಸ್ತಾನು ಗಮನಿಸಿದಾಗ ಜನರು ಹೋರಾಟದಲ್ಲಿ ತೊಡಗಿಸಿಕೊಂಡಿರುವುದನ್ನು ಸೂಚಿಸುತ್ತದೆ ಮತ್ತು ಅಂತಹ ಹೋರಾಟಗಳು ಅಂದು ಭೂಮಿ ಅಥವಾ ಹಕ್ಕುಗಳಿಗಾಗಿ ದೊಡ್ಡ ಗುಂಪುಗಳ ನಡುವೆ ಇದ್ದಿರಬಹುದು ಎಂದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…