ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ ಕೃಷಿಭೂಮಿಯಲ್ಲಿ ಆಕಸ್ಮಿಕ ಉತ್ಖನನದ ಸಂದರ್ಭ ಸುಮಾರು 4,000 ವರ್ಷಗಳ ಹಿಂದಿನ ದೊಡ್ಡ ಸಂಖ್ಯೆಯ ತಾಮ್ರದ ಕತ್ತಿಗಳು ಪತ್ತೆಯಾಗಿದೆ.
ಮೈನ್ ಪುರಿ ಜಿಲ್ಲೆಯ ರೈತ ತನ್ನ ಹೊಲವನ್ನು ಸಮತಟ್ಟು ಮಾಡುತ್ತಿದ್ದನು. ಈ ಸಂದರ್ಭ ತಾಮ್ರದ ಕತ್ತಿಗಳು ಪತ್ತೆಯಾಗಿತ್ತು. ಆರಂಭದಲ್ಲಿ, ರೈತರು ಈ ಕಲಾಕೃತಿಗಳನ್ನು ಚಿನ್ನ ಮತ್ತು ಬೆಳ್ಳಿಯೆಂದು ಭಾವಿಸಿ ಮನೆಗೆ ಕೊಂಡು ಹೋಗಿದ್ದರು. ಆದರೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ ಬಳಿಕ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಗೆ ಮಾಹಿತಿ ನೀಡಲಾಯಿತು.
ತಜ್ಞರ ಪ್ರಕಾರ, ಆಯುಧಗಳನ್ನು ತಾಮ್ರದ ಯುಗಕ್ಕೆ ಅಂದರೆ ಸರಿಸುಮಾರು 4,000 ವರ್ಷಗಳ ಹಿಂದೆ ಗುರುತಿಸಬಹುದು. “ಈ ತಾಮ್ರದ ಶೇಖರಣೆಗಳು ಚಾಲ್ಕೋಲಿಥಿಕ್ ಅವಧಿಗೆ ಸೇರಿವೆ ಮತ್ತು ಓಕ್ರೆ-ಬಣ್ಣದ ಕುಂಬಾರಿಕೆ (OCP) ಉಪಸ್ಥಿತಿಯು ಈ ಸಮಯದೊಂದಿಗೆ ನೇರವಾಗಿ ಸಂಬಂಧಿಸಿದೆ” ಎಂದು ಪುರಾತತ್ವ ನಿರ್ದೇಶಕ ಭುವನ್ ವಿಕ್ರಮ್ ಮಾಧ್ಯಮಗಳಿಗೆ ಹೇಳಿದರು.
ಪುರಾತತ್ವ ಇಲಾಖೆಯ ಶಾಸ್ತ್ರಜ್ಞ ರಾಜ್ ಕುಮಾರ್, “ಆಯುಧಗಳ ದಾಸ್ತಾನು ಗಮನಿಸಿದಾಗ ಜನರು ಹೋರಾಟದಲ್ಲಿ ತೊಡಗಿಸಿಕೊಂಡಿರುವುದನ್ನು ಸೂಚಿಸುತ್ತದೆ ಮತ್ತು ಅಂತಹ ಹೋರಾಟಗಳು ಅಂದು ಭೂಮಿ ಅಥವಾ ಹಕ್ಕುಗಳಿಗಾಗಿ ದೊಡ್ಡ ಗುಂಪುಗಳ ನಡುವೆ ಇದ್ದಿರಬಹುದು ಎಂದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…