ಸೀಮೆಎಣ್ಣೆ ಗೋದಾಮಿನಲ್ಲಿ ಬೆಂಕಿ ಅನಾಹುತ | ಅಪಾರ ನಷ್ಟ

October 23, 2022
2:04 PM

ಸೀಮೆಎಣ್ಣೆ ಗೋದಾಮಿನಲ್ಲಿ ಭಾರೀ ಬೆಂಕಿ ಅನಾಹುತ ಉಂಟಾಗಿದ್ದು, ಅಪಾರ ನಾಶ ನಷ್ಟ ಉಂಟಾಗಿದೆ. ಕಾಸರಗೋಡು ನಗರದ  ವಿದ್ಯಾನಗರದ ಬಳಿ ಗೋದಾಮಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ದುರಂತ ನಡೆದ ಸಂದರ್ಭದಲ್ಲಿ ಗೋದಾಮಿನಲ್ಲಿ ಕಾರ್ಮಿಕರು ಇಲ್ಲದಿದ್ದುದರಿಂದ ಅಪಾಯ ತಪ್ಪಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡಿ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಮುನೀರ್ ಎಂಬವರ ಮಾಲಕತ್ವದ ಎರಡಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಶಾಮಕ ದಳ ಹಾಗೂ ಪರಿಸರ ವಾಸಿಗಳ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ.ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ಈ ಕಟ್ಟಡದಲ್ಲಿದ್ದವರನ್ನು ತೆರವು ಗೊಳಿಸಲಾಯಿತು. ಕಾಸರಗೋಡಿನಿಂದ ಆಗಮಿಸಿದ ಮೂರು ಅಗ್ನಿಶಾಮಕ ಘಟಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror