ಬೆಂಕಿ ಅವಘಡ, ಕಾಡ್ಗಿಚ್ಚು, ಬೆಂಕಿ ಜ್ವಾಲೆ ಕಂಡುಬಂದರೆ ಮಾಹಿತಿ ನೀಡಲು ಕರೆ

March 7, 2023
8:30 AM

ತಾಪಮಾನದ ವೈಪರಿತ್ಯದಿಂದ ಬಿಸಿಲಿನ ಶಾಖ 32 ಡಿಗ್ರಿ ಯಿಂದ 40.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಸೂರ್ಯನ ಕಿರಣಗಳು ಸುಡುವಂತೆ ಭಾಸವಾಗುತ್ತಿದೆ.

Advertisement
Advertisement
ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ವಿದ್ಯುತ್ ಸರಬರಾಜು ಪರಿವರ್ತಕ, ತಂತಿಗಳ ಮೂಲಕ ಕಿಡಿ ಹಾರಿ ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು ಅರಣ್ಯ ಪ್ರದೇಶದ ಬಳಿ ವಿನಾಕಾರಣ ತ್ಯಾಜ್ಯಗಳಿಗೆ ಬೆಂಕಿ ಹಾಕುವುದರಿಂದ ಬೆಂಕಿ ಜ್ವಾಲೆ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ. ಆದ್ದರಿಂದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಎಲ್ಲೆಂದರಲ್ಲಿ ಬೆಂಕಿ ಹಚ್ಚುವುದು, ಅನಗತ್ಯ ಪಟಾಕಿ ಸ್ಟೋಟಿಸುವುದು, ರಸ್ತೆ ಪಕ್ಕದಲ್ಲಿ ಧೂಮಪಾನ ಮಾಡುವುದು ಚಿಕ್ಕ, ಪುಟ್ಟ ಅಂಗಡಿಯವರು ತ್ಯಾಜ್ಯ ಬಿಸಾಡಿ ಬೆಂಕಿ ಹಚ್ಚುವುದು ಅಪರಾಧ ಎಂದು ಪರಿಗಣಿಸಲಾಗಿದೆ.

ಅರಣ್ಯ ವೀಕ್ಷಕರು, ಅಧಿಕಾರಿಗಳು ನಿರಂತರ ಅರಣ್ಯ ಪ್ರದೇಶಗಳ ರಕ್ಷಣೆಗೆ ಕರ್ತವ್ಯ ನಿರ್ವಹಿಸುತ್ತಿದ್ದು ಬೆಂಕಿ ಅವಘಡ, ಕಾಡ್ಗಿಚ್ಚು, ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು ಆಯಾ ವಲಯದ ಉಪ್ಪಿನಂಗಡಿ-9480346249, ಪುತ್ತೂರು-9980808650, ಬೆಳ್ತಂಗಡಿ-9481808105, ಸುಳ್ಯ-9449506304, ಬಂಟ್ವಾಳ-9845732332, ಮಂಗಳೂರು-9620426901, ಸುಬ್ರಹ್ಮಣ್ಯ-9036604975 ಹಾಗೂ ಪಂಜ- 9481390040 ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಂಗಳೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |
May 27, 2025
12:41 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?
May 27, 2025
12:28 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group