ತಾಪಮಾನದ ವೈಪರಿತ್ಯದಿಂದ ಬಿಸಿಲಿನ ಶಾಖ 32 ಡಿಗ್ರಿ ಯಿಂದ 40.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಸೂರ್ಯನ ಕಿರಣಗಳು ಸುಡುವಂತೆ ಭಾಸವಾಗುತ್ತಿದೆ.
ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ವಿದ್ಯುತ್ ಸರಬರಾಜು ಪರಿವರ್ತಕ, ತಂತಿಗಳ ಮೂಲಕ ಕಿಡಿ ಹಾರಿ ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು ಅರಣ್ಯ ಪ್ರದೇಶದ ಬಳಿ ವಿನಾಕಾರಣ ತ್ಯಾಜ್ಯಗಳಿಗೆ ಬೆಂಕಿ ಹಾಕುವುದರಿಂದ ಬೆಂಕಿ ಜ್ವಾಲೆ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ. ಆದ್ದರಿಂದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಎಲ್ಲೆಂದರಲ್ಲಿ ಬೆಂಕಿ ಹಚ್ಚುವುದು, ಅನಗತ್ಯ ಪಟಾಕಿ ಸ್ಟೋಟಿಸುವುದು, ರಸ್ತೆ ಪಕ್ಕದಲ್ಲಿ ಧೂಮಪಾನ ಮಾಡುವುದು ಚಿಕ್ಕ, ಪುಟ್ಟ ಅಂಗಡಿಯವರು ತ್ಯಾಜ್ಯ ಬಿಸಾಡಿ ಬೆಂಕಿ ಹಚ್ಚುವುದು ಅಪರಾಧ ಎಂದು ಪರಿಗಣಿಸಲಾಗಿದೆ. ಅರಣ್ಯ ವೀಕ್ಷಕರು, ಅಧಿಕಾರಿಗಳು ನಿರಂತರ ಅರಣ್ಯ ಪ್ರದೇಶಗಳ ರಕ್ಷಣೆಗೆ ಕರ್ತವ್ಯ ನಿರ್ವಹಿಸುತ್ತಿದ್ದು ಬೆಂಕಿ ಅವಘಡ, ಕಾಡ್ಗಿಚ್ಚು, ಬೆಂಕಿ ಜ್ವಾಲೆ ಕಂಡು ಬಂದರೆ ಸಾರ್ವಜನಿಕರು ಆಯಾ ವಲಯದ ಉಪ್ಪಿನಂಗಡಿ-9480346249, ಪುತ್ತೂರು-9980808650, ಬೆಳ್ತಂಗಡಿ-9481808105, ಸುಳ್ಯ-9449506304, ಬಂಟ್ವಾಳ-9845732332, ಮಂಗಳೂರು-9620426901, ಸುಬ್ರಹ್ಮಣ್ಯ-9036604975 ಹಾಗೂ ಪಂಜ- 9481390040 ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಂಗಳೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…