ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ | ಇಬ್ಬರು ಸಜೀವ ದಹನ |

September 21, 2021
8:45 PM

ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿನ ಆಶ್ರಿತ್ ಅಪಾರ್ಟ್‌ಮೆಂಟ್‌ನಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು  ಮೂವರು  ಮೃತಪಟ್ಟಿದ್ದಾರೆ . ಮೂರನೇ ಮಹಡಿಯಲ್ಲಿದ್ದ  ಇಬ್ಬರು ಸಜೀವದಹನವಾಗಿದ್ದಾರೆ. ಪ್ಲಾಟ್‌ ನ ಮೂರು ಮಹಡಿಯಲ್ಲಿ  ಬೆಂಕಿಯ ಕೆನ್ನಾಲಿಗೆ ಹರಡಿಕೊಂಡಿತ್ತು.

ಮಧ್ಯಾಹ್ನ 3.30ರ ವೇಳೆಗೆ ಸಿಲಿಂಡರ್ ಸೋರಿಕೆಯಾಗಿದ್ದು ತಕ್ಷಣವೇ ಬೆಂಕಿ ಹತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಇಬ್ಬರು ಮಹಿಳೆಯರು ಸಜೀವ ದಹನವಾಗಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. 210  ನೇ ಪ್ಲಾಟ್‌ನಲ್ಲಿದ್ದ  ಲಕ್ಷ್ಮೀದೇವಿ (82),  ಭಾಗ್ಯ ರೇಖಾ (59) ಸಜೀವ ದಹನಗೊಂಡವರು ಎಂದು ತಿಳಿದುಬಂದಿದೆ.

ಬೆಂಕಿ ಹತ್ತಿಕೊಂಡು ತಕ್ಷಣವೇ ಬೆಂಕಿ ವ್ಯಾಪಿಸಿದ ಕಾರಣ ಪ್ಲಾಟ್‌ ನಿಂದ ಹೊರಬರಲಾಗದೆ ಇಬ್ಬರು ಮಹಿಳೆಯರು ಒದ್ದಾಟ ನಡೆಸಿ ಪ್ರಾಣ ಉಳಿಸುವಂತೆ ಅಂಗಲಾಚುತ್ತಿದ್ದರು. ಕೊನೆಗೆ ಬೆಂಕಿ ವ್ಯಾಪಿಸಿ ದಹನವಾದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಗ್ನಿಶಾಮಕದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?
August 8, 2026
11:50 AM
by: ಸಾಯಿಶೇಖರ್ ಕರಿಕಳ
ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?
August 8, 2026
7:12 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ
August 8, 2026
6:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror