ಸೀಮೆಎಣ್ಣೆ ಗೋದಾಮಿನಲ್ಲಿ ಭಾರೀ ಬೆಂಕಿ ಅನಾಹುತ ಉಂಟಾಗಿದ್ದು, ಅಪಾರ ನಾಶ ನಷ್ಟ ಉಂಟಾಗಿದೆ. ಕಾಸರಗೋಡು ನಗರದ ವಿದ್ಯಾನಗರದ ಬಳಿ ಗೋದಾಮಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ದುರಂತ ನಡೆದ ಸಂದರ್ಭದಲ್ಲಿ ಗೋದಾಮಿನಲ್ಲಿ ಕಾರ್ಮಿಕರು ಇಲ್ಲದಿದ್ದುದರಿಂದ ಅಪಾಯ ತಪ್ಪಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡಿ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.
ಮುನೀರ್ ಎಂಬವರ ಮಾಲಕತ್ವದ ಎರಡಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಶಾಮಕ ದಳ ಹಾಗೂ ಪರಿಸರ ವಾಸಿಗಳ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ.ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ಈ ಕಟ್ಟಡದಲ್ಲಿದ್ದವರನ್ನು ತೆರವು ಗೊಳಿಸಲಾಯಿತು. ಕಾಸರಗೋಡಿನಿಂದ ಆಗಮಿಸಿದ ಮೂರು ಅಗ್ನಿಶಾಮಕ ಘಟಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ…
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…