ಸೀಮೆಎಣ್ಣೆ ಗೋದಾಮಿನಲ್ಲಿ ಭಾರೀ ಬೆಂಕಿ ಅನಾಹುತ ಉಂಟಾಗಿದ್ದು, ಅಪಾರ ನಾಶ ನಷ್ಟ ಉಂಟಾಗಿದೆ. ಕಾಸರಗೋಡು ನಗರದ ವಿದ್ಯಾನಗರದ ಬಳಿ ಗೋದಾಮಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ದುರಂತ ನಡೆದ ಸಂದರ್ಭದಲ್ಲಿ ಗೋದಾಮಿನಲ್ಲಿ ಕಾರ್ಮಿಕರು ಇಲ್ಲದಿದ್ದುದರಿಂದ ಅಪಾಯ ತಪ್ಪಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡಿ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.
ಮುನೀರ್ ಎಂಬವರ ಮಾಲಕತ್ವದ ಎರಡಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಶಾಮಕ ದಳ ಹಾಗೂ ಪರಿಸರ ವಾಸಿಗಳ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ.ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ಈ ಕಟ್ಟಡದಲ್ಲಿದ್ದವರನ್ನು ತೆರವು ಗೊಳಿಸಲಾಯಿತು. ಕಾಸರಗೋಡಿನಿಂದ ಆಗಮಿಸಿದ ಮೂರು ಅಗ್ನಿಶಾಮಕ ಘಟಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…
ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…
ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…