ಸೀಮೆಎಣ್ಣೆ ಗೋದಾಮಿನಲ್ಲಿ ಭಾರೀ ಬೆಂಕಿ ಅನಾಹುತ ಉಂಟಾಗಿದ್ದು, ಅಪಾರ ನಾಶ ನಷ್ಟ ಉಂಟಾಗಿದೆ. ಕಾಸರಗೋಡು ನಗರದ ವಿದ್ಯಾನಗರದ ಬಳಿ ಗೋದಾಮಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ದುರಂತ ನಡೆದ ಸಂದರ್ಭದಲ್ಲಿ ಗೋದಾಮಿನಲ್ಲಿ ಕಾರ್ಮಿಕರು ಇಲ್ಲದಿದ್ದುದರಿಂದ ಅಪಾಯ ತಪ್ಪಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡಿ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.
ಮುನೀರ್ ಎಂಬವರ ಮಾಲಕತ್ವದ ಎರಡಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಶಾಮಕ ದಳ ಹಾಗೂ ಪರಿಸರ ವಾಸಿಗಳ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ.ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ಈ ಕಟ್ಟಡದಲ್ಲಿದ್ದವರನ್ನು ತೆರವು ಗೊಳಿಸಲಾಯಿತು. ಕಾಸರಗೋಡಿನಿಂದ ಆಗಮಿಸಿದ ಮೂರು ಅಗ್ನಿಶಾಮಕ ಘಟಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…